ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ನಿಕಟಪೂರ್ವ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಎಂ.ಐ.ಎಸ್ ಸಂಯೋಜಕ ಜಿ.ಎಲ್.ಮಧುಸೂದನ್ (ಡಿ.ಎಂ.ಐ.ಎಸ್), ಚಿಂತಾಮಣಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಆರ್.ಮಂಜುನಾಥ, ಶಿಡ್ಲಘಟ್ಟ ತಾಲ್ಲೂಕು ತಾಂತ್ರಿಕ ಸಹಾಯಕ ಎಂಜಿನಿಯರ್ ವಿವೇಕ್ ಮತ್ತು ಅತ್ಯುತ್ತಮ ಪಂಚಾಯಿತಿ ಅಧಿಕಾರಿ ಈ.ತಿಮ್ಮಸಂದ್ರ ಪಿಡಿಒ ತನ್ವೀರ್ ಅಹಮದ್ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.