ನ್ಯಾಷನಲ್ ಕಾಲೇಜಿನ ಭೌತಶಾಸ್ತ್ರದ ಉಪನ್ಯಾಸಕ ವೆಂಕಟಶಿವಾರೆಡ್ಡಿ ಮಾತನಾಡಿ, ಪ್ರೌಢಶಿಕ್ಷಣ ಸೇರಿದಂತೆ ಉನ್ನತ ಶಿಕ್ಷಣದಲ್ಲಿ ಗಣನೀಯವಾಗಿ ದಾಖಲಾತಿ ಪ್ರಮಾಣ ಕುಸಿಯುತ್ತಿದೆ. ಶಿಕ್ಷಣದ ಗುಣಮಟ್ಟ, ಖಾಸಗೀಕರಣದಿಂದ ದುಬಾರಿ ಆಗುತ್ತಿರುವ ಶಿಕ್ಷಣದ ಪದ್ಧತಿ, ಶಿಕ್ಷಣದ ಕ್ಷೇತ್ರದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಿವೆ. ಶಿಕ್ಷಣದ ಸಮಸ್ಯೆಗಳನ್ನು ಈಡೇರಿಸದ ಸರ್ಕಾರ ಹೊಸ ಶಿಕ್ಷಣ ಪದ್ಧತಿಯಿಂದ ಹೇಗೆ ಸಮಸ್ಯೆ ನಿವಾರಣೆ ಆಗುತ್ತದೆ ಎಂದು ಪ್ರಶ್ನಿಸಿದರು.