ಪರಿಸರ ವೇದಿಕೆಯ ಮುಖಂಡ ಆನಂದ್ ಮಾತನಾಡಿ, ನಾಗರೀಕತೆ ಹಾಗೂ ಜ್ಞಾನದ ಬೆಳವಣಿಗೆಯಲ್ಲಿ ಗ್ರಂಥಾಲಯಗಳ ಪಾತ್ರ ಅಪಾರ. ಐಎಎಸ್, ಕೆಎಎಸ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ವಿದ್ಯಾರ್ಥಿಗಳು ಗ್ರಂಥಾಲಯಗಳಲ್ಲಿನ ಪುಸ್ತಕಗಳ ಪ್ರಯೋಜನ ಪಡೆಯಬೇಕು. ಪ್ರಸ್ತುತ ಪಟ್ಟಣದಲ್ಲಿರುವ ಗ್ರಂಥಾಲಯಕ್ಕೆ ಸ್ವಂತ ಕಟ್ಟಡವಿಲ್ಲದೇ ಅಧೋಗತಿಗೆ ತಲುಪಿದೆ. ಸ್ಥಳೀಯ ಪ್ರತಿನಿಧಿಗಳು ಕೂಡಲೇ ಸುಸಜ್ಜಿತವಾದ ಹಾಗೂಆಧುನಿಕ ರೀತಿಯ ಗ್ರಂಥಾಲಯ ಸ್ಥಾಪನೆ ಮಾಡಲು ಮುಂದಾಗಬೇಕು
ಎಂದರು.