ಸದ್ಗುರು ಯೋಗಿನಾರೇಯಣ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ ಘಂಟನಾದ, ಸುಪ್ರಭಾತ, ಗೋಪೂಜೆ, ವಿಶೇಷ ಅಭಿಷೇಕ, ಅಷ್ಟಾವಧಾನ ಸೇವೆ ಸಮರ್ಪಿಸಲಾಯಿತು. ತಾತಯ್ಯನವರ ಜೀವ ಸಮಾಧಿಯ ಮೂಲ ಬೃಂದಾವನವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಧರ್ಮಾಧಿಕಾರಿ ಡಾಎಂ.ಆರ್. ಜಯರಾಮ್ ನೇತೃತ್ವದಲ್ಲಿ ಸಾಮೂಹಿಕ ನಾಮ ಸಂಕೀರ್ತನೆ ಸಮರ್ಪಿಸಲಾಯಿತು.