<p><strong>ಚಿಂತಾಮಣಿ: </strong>ತಾಲ್ಲೂಕಿನ ನಿಮ್ಮಕಾಯಲಹಳ್ಳಿ ದರ್ಗಾಗೆ ಆಡಳಿತಾಧಿಕಾರಿ ನೇಮಿಸಬೇಕು ಎಂದು ಜಿಲ್ಲಾ ವಕ್ಫ್ ಮಂಡಳಿ ಸದಸ್ಯ ಹಾಜಿ ಅನ್ಸರ್ ಖಾನ್ ಒತ್ತಾಯಿಸಿದ್ದಾರೆ.</p>.<p>ದರ್ಗಾದ ಸಮೀಪದ ಖಬರಸ್ಥಾನಕ್ಕೆ ತಡೆಗೋಡೆ ನಿರ್ಮಾಣಕ್ಕೆ ವಕ್ಫ್ ಮಂಡಳಿಯಿಂದ ₹ 5 ಲಕ್ಷ ಬಿಡುಗಡೆಯಾಗಿತ್ತು. ದರ್ಗಾ ಮಂಡಳಿ ಅಧ್ಯಕ್ಷರು ಕಾಮಗಾರಿ ಮಾಡದೆ ಹಣ ಡ್ರಾ ಮಾಡಿಕೊಂಡು ಅವ್ಯವಹಾರ ಮಾಡಿದ್ದಾರೆ. ಜಿಲ್ಲಾ ವಕ್ಫ್ ಮಂಡಳಿ ನೋಟಿಸ್ ನೀಡಿದ ನಂತರ ಹಣವನ್ನು ಬ್ಯಾಂಕ್ಗೆ ಮರುಪಾವತಿ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ಅಧ್ಯಕ್ಷರು ಬ್ಯಾಂಕ್ನಿಂದ ಹಣ ಡ್ರಾ ಮಾಡಿದರೂ, ತಡೆಗೋಡೆ ಏಕೆ ನಿರ್ಮಿಸಿಲ್ಲ. ದರ್ಗಾ ಆಡಳಿತ ಮಂಡಳಿ ಯಾವುದೇ ಅಭಿವೃದ್ಧಿ ಕೆಲಸ ಕೈಗೊಂಡಿಲ್ಲ. ದರ್ಗಾ ಸುತ್ತಮುತ್ತ ಸ್ವಚ್ಛತೆ ಕಾಪಾಡುತ್ತಿಲ್ಲ ಎಂದು ಟೀಕಿಸಿದರು.</p>.<p>ದರ್ಗಾ ಆಡಳಿತ ಮಂಡಳಿ ಅವಧಿ ಮುಕ್ತಾಯವಾಗಿದೆ. ಆಡಳಿತಾಧಿಕಾರಿ ನೇಮಿಸಿ ನಂತರ ಉತ್ತಮ ಹಾಗೂ ಕ್ರಿಯಾಶೀಲ ಆಡಳಿತ ಮಂಡಳಿ ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>ತಾಲ್ಲೂಕಿನ ನಿಮ್ಮಕಾಯಲಹಳ್ಳಿ ದರ್ಗಾಗೆ ಆಡಳಿತಾಧಿಕಾರಿ ನೇಮಿಸಬೇಕು ಎಂದು ಜಿಲ್ಲಾ ವಕ್ಫ್ ಮಂಡಳಿ ಸದಸ್ಯ ಹಾಜಿ ಅನ್ಸರ್ ಖಾನ್ ಒತ್ತಾಯಿಸಿದ್ದಾರೆ.</p>.<p>ದರ್ಗಾದ ಸಮೀಪದ ಖಬರಸ್ಥಾನಕ್ಕೆ ತಡೆಗೋಡೆ ನಿರ್ಮಾಣಕ್ಕೆ ವಕ್ಫ್ ಮಂಡಳಿಯಿಂದ ₹ 5 ಲಕ್ಷ ಬಿಡುಗಡೆಯಾಗಿತ್ತು. ದರ್ಗಾ ಮಂಡಳಿ ಅಧ್ಯಕ್ಷರು ಕಾಮಗಾರಿ ಮಾಡದೆ ಹಣ ಡ್ರಾ ಮಾಡಿಕೊಂಡು ಅವ್ಯವಹಾರ ಮಾಡಿದ್ದಾರೆ. ಜಿಲ್ಲಾ ವಕ್ಫ್ ಮಂಡಳಿ ನೋಟಿಸ್ ನೀಡಿದ ನಂತರ ಹಣವನ್ನು ಬ್ಯಾಂಕ್ಗೆ ಮರುಪಾವತಿ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ಅಧ್ಯಕ್ಷರು ಬ್ಯಾಂಕ್ನಿಂದ ಹಣ ಡ್ರಾ ಮಾಡಿದರೂ, ತಡೆಗೋಡೆ ಏಕೆ ನಿರ್ಮಿಸಿಲ್ಲ. ದರ್ಗಾ ಆಡಳಿತ ಮಂಡಳಿ ಯಾವುದೇ ಅಭಿವೃದ್ಧಿ ಕೆಲಸ ಕೈಗೊಂಡಿಲ್ಲ. ದರ್ಗಾ ಸುತ್ತಮುತ್ತ ಸ್ವಚ್ಛತೆ ಕಾಪಾಡುತ್ತಿಲ್ಲ ಎಂದು ಟೀಕಿಸಿದರು.</p>.<p>ದರ್ಗಾ ಆಡಳಿತ ಮಂಡಳಿ ಅವಧಿ ಮುಕ್ತಾಯವಾಗಿದೆ. ಆಡಳಿತಾಧಿಕಾರಿ ನೇಮಿಸಿ ನಂತರ ಉತ್ತಮ ಹಾಗೂ ಕ್ರಿಯಾಶೀಲ ಆಡಳಿತ ಮಂಡಳಿ ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>