ಆದರೆ, ಇದನ್ನು ಅಲ್ಲಗಳೆಯುತ್ತ ಬಂದಿದ್ದ ನಿರ್ಮಲಾ ಅವರು, ‘ಉಪಾಧ್ಯಕ್ಷ ಸ್ಥಾನದ ಅಧಿಕಾರ ಹಂಚಿಕೆ ಮಾಡಿದ್ದರು ಎನ್ನುವುದೇ ಶುದ್ಧ ಸುಳ್ಳು’ ಎಂದಿದ್ದರು. ಜತೆಗೆ, ಉಪಾಧ್ಯಕ್ಷೆ ಸ್ಥಾನ ಸರಸ್ವತಮ್ಮ ಅವರಿಗೆ ಬಿಟ್ಟು ಕೊಡುವಂತೆ ಕಾಂಗ್ರೆಸ್ ಹೈಕಮಾಂಡ್, ಸಚಿವ ಡಾ.ಕೆ.ಸುಧಾಕರ್, ಅನೇಕ ಶಾಸಕರು ಹೇಳಿದರೂ ನಿರ್ಮಲಾ ಅವರು ಸೊಪ್ಪು ಹಾಕದೆ, ಸ್ವಪಕ್ಷೀಯರೇ ಸೆಡ್ಡು ಹೊಡೆದು ಅಧಿಕಾರದಲ್ಲಿ ಮುಂದುವರಿದಿದ್ದರು.