ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ರಸ್ತೆ ನಿರ್ವಹಣೆ ಕಾಮಗಾರಿ ನಡೆಯುತ್ತಿರುವ ಕಾರಣ ಗಿರಿಧಾಮಕ್ಕೆ ಎರಡು ದಿನ ಪ್ರವಾಸಿಗರು ಹಾಗೂ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ಮಾರ್ಚ್24ರ ಬೆಳಿಗ್ಗೆ 10ರಿಂದ ಮಾರ್ಚ್ 25ರ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಆದೇಶದಲ್ಲಿ ತಿಳಿಸಿದ್ದಾರೆ.