ಚಿಂತಾಮಣಿ: ಲಾಕ್ಡೌನ್ನಿಂದ ಕೆಲಸ ಸಿಗುತ್ತಿಲ್ಲ ಎಂಬ ಕಾರಣಕ್ಕೆ ತಾಲ್ಲೂಕಿನ ದೊಡ್ಡಬೊಮ್ಮನಹಳ್ಳಿ ಕಾರ್ಮಿಕ ಮಂಜುನಾಥ್ (38) ಸೋಮವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಟ್ರಾಕ್ಟರ್ ಚಾಲನೆ, ಕೂಲಿ ನಾಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಕೆಲ ದಿನಗಳಿಂದ ಕೂಲಿ ಸಿಗದೆ ಜೀವನ ನಡೆಸುವುದೇ ದುಸ್ತರವಾಗಿತ್ತು. ಪತ್ನಿ ಹಾಗೂ ಇಬ್ಬರು ಮಕ್ಕಳ ಸಂಸಾರ ಸಾಗಿಸುವುದು ಕಷ್ಟವಾಗಿ ಜಿಗುಪ್ಸೆಗೊಂಡು ಮರಕ್ಕೆ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದರು.
ಕೆಲವರು ಬೇರೆಯವರು ನೀಡಿದ್ದನ್ನು ಪಡೆದು ತಿನ್ನುವುದು ಅವಮಾನ ಎಂದು ಭಾವಿಸುತ್ತಾರೆ ಎಂದು ಗ್ರಾಮದ ಮುಖಂಡ ವೆಂಕಟರೆಡ್ಡಿ ತಿಳಿಸಿದರು.