<p><strong>ಚಿಕ್ಕಬಳ್ಳಾಪುರ</strong>: ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಸೋಂಕಿಗೆ ಎಲ್ಲ ಜಿಲ್ಲೆಗಳಲ್ಲಿಯೂ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅಗತ್ಯ ಪ್ರಮಾಣದಲ್ಲಿ ಔಷಧಿ ಸಿಗುತ್ತಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿತ್ಯ ಎಂಟರಿಂದ ಹತ್ತು ಸಾವಿರ ವಯಲ್ಸ್ ಅಗತ್ಯವಿದೆ. ಒಬ್ಬ ಸೋಂಕಿತರಿಗೆ ಕನಿಷ್ಠ ಮೂರ್ನಾಲ್ಕು ದಿನ ನಿತ್ಯ ಆರು ವಯಲ್ಸ್ ಔಷಧಿ ಕೊಡಬೇಕು. ಆ ನಂತರ ಕಡಿಮೆ ಮಾಡಬಹುದು ಎಂದು ಹೇಳಿದರು.</p>.<p>ಕಪ್ಪು ಶಿಲೀಂಧ್ರ ನಿಯಂತ್ರಣ ಔಷಧಿಗೆ ಹೆಚ್ಚಿನ ಬೇಡಿಕೆ ಇದೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಮೂಲಕ ಕೇಂದ್ರ ಸರ್ಕಾರದಿಂದ ಔಷಧಿ ತರಿಸುವ ಕೆಲಸ ಮಾಡಲಾಗುತ್ತಿದೆ ಎಂದರು.</p>.<p>ಮುಂದಿನ ಒಂದು ತಿಂಗಳ ಅವಧಿಗೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯು ವರದಿ ನೀಡಿದೆ. ವರದಿಯ ಅಂಶಗಳ ಬಗ್ಗೆ ಚರ್ಚಿಸಲು ಮಂಗಳವಾರ (ಜೂ.1) ಮುಖ್ಯಮಂತ್ರಿ ಅವರು ಸಚಿವರ ಸಭೆ ಕರೆದಿದ್ದಾರೆ. ಆ ಸಭೆಯ ನಂತರ ಅವರು ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಹೇಳಿದರು.</p>.<p>ಲಾಕ್ಡೌನ್ನಿಂದ ಸೋಂಕಿನ ಪ್ರಮಾಣ ತಗ್ಗಿದೆ. ಶೇ 40ರಿಂದ 50ರಷ್ಟಿದ್ದ ಸೋಂಕಿನ ಪ್ರಮಾಣ ಶೇ 15ಕ್ಕೆ ಇಳಿದಿದೆ. ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಸೋಂಕಿಗೆ ಎಲ್ಲ ಜಿಲ್ಲೆಗಳಲ್ಲಿಯೂ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅಗತ್ಯ ಪ್ರಮಾಣದಲ್ಲಿ ಔಷಧಿ ಸಿಗುತ್ತಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿತ್ಯ ಎಂಟರಿಂದ ಹತ್ತು ಸಾವಿರ ವಯಲ್ಸ್ ಅಗತ್ಯವಿದೆ. ಒಬ್ಬ ಸೋಂಕಿತರಿಗೆ ಕನಿಷ್ಠ ಮೂರ್ನಾಲ್ಕು ದಿನ ನಿತ್ಯ ಆರು ವಯಲ್ಸ್ ಔಷಧಿ ಕೊಡಬೇಕು. ಆ ನಂತರ ಕಡಿಮೆ ಮಾಡಬಹುದು ಎಂದು ಹೇಳಿದರು.</p>.<p>ಕಪ್ಪು ಶಿಲೀಂಧ್ರ ನಿಯಂತ್ರಣ ಔಷಧಿಗೆ ಹೆಚ್ಚಿನ ಬೇಡಿಕೆ ಇದೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಮೂಲಕ ಕೇಂದ್ರ ಸರ್ಕಾರದಿಂದ ಔಷಧಿ ತರಿಸುವ ಕೆಲಸ ಮಾಡಲಾಗುತ್ತಿದೆ ಎಂದರು.</p>.<p>ಮುಂದಿನ ಒಂದು ತಿಂಗಳ ಅವಧಿಗೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯು ವರದಿ ನೀಡಿದೆ. ವರದಿಯ ಅಂಶಗಳ ಬಗ್ಗೆ ಚರ್ಚಿಸಲು ಮಂಗಳವಾರ (ಜೂ.1) ಮುಖ್ಯಮಂತ್ರಿ ಅವರು ಸಚಿವರ ಸಭೆ ಕರೆದಿದ್ದಾರೆ. ಆ ಸಭೆಯ ನಂತರ ಅವರು ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಹೇಳಿದರು.</p>.<p>ಲಾಕ್ಡೌನ್ನಿಂದ ಸೋಂಕಿನ ಪ್ರಮಾಣ ತಗ್ಗಿದೆ. ಶೇ 40ರಿಂದ 50ರಷ್ಟಿದ್ದ ಸೋಂಕಿನ ಪ್ರಮಾಣ ಶೇ 15ಕ್ಕೆ ಇಳಿದಿದೆ. ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>