ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷವಾದರೂ ಆರಂಭವಾಗದ ಕಾಮಗಾರಿ: ನೋಟಿಸ್‌

Last Updated 3 ಜೂನ್ 2020, 11:22 IST
ಅಕ್ಷರ ಗಾತ್ರ

ಚಿಂತಾಮಣಿ: ತಾಲ್ಲೂಕಿನ ನಿಮ್ಮಕಾಯಲಹಳ್ಳಿ ಗ್ರಾಮದಲ್ಲಿರುವ ಹಜರತ್ ಸೈಯದ್ ಜಲಾಲ್ ಖಾಕಿ ಷಾ ದರ್ಗಾ ಸಮೀಪದ ಖಬರಸ್ಥಾನದ ತಡೆಗೋಡೆ ನಿರ್ಮಾಣಕ್ಕೆ ಜಿಲ್ಲಾ ವಕ್ಫ್ ಮಂಡಳಿ ₹ 5 ಲಕ್ಷ ಬಿಡುಗಡೆ ಮಾಡಿ ವರ್ಷವಾಗಿದ್ದರೂ, ಕಾಮಗಾರಿ ಕೈಗೊಳ್ಳದಿರುವ ಬಗ್ಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ.

ವಕ್ಫ್ ಮಂಡಳಿ ₹ 5 ಲಕ್ಷ ಬಿಡುಗಡೆ ಮಾಡಿದ್ದರೂ ಏಕೆ ತಡೆಗೋಡೆ ಕಾಮಗಾರಿ ಕೈಗೊಂಡಿಲ್ಲ. ಕಾಮಗಾರಿ ಬಗ್ಗೆ ವರದಿಯನ್ನೂ ನೀಡಿಲ್ಲ. ಖಾತೆಯಿಂದ ಹಣ ಡ್ರಾ ಮಾಡಲಾಗಿದೆಯೇ? ಹಣ ಎಲ್ಲಿದೆ? ಅನುದಾನದ ಖರ್ಚು- ವೆಚ್ಚದ ರಶೀದಿ, ಛಾಯಾಚಿತ್ರ, ಗುತ್ತಿಗೆದಾರರ ಬಿಲ್‌ಗಳನ್ನು 7 ದಿನದ ಒಳಗಾಗಿ ಸಲ್ಲಿಸಬೇಕು ಎಂದು ಜಿಲ್ಲಾ ವಕ್ಫ್ ಮಂಡಳಿ ಅಧಿಕಾರಿ ದರ್ಗಾ ಕಮಿಟಿಯ ಅಧ್ಯಕ್ಷ ಮತ್ತು ಕಾರ್ಯದರ್ಶಿಗೆ ನೀಡಿರುವ ನೋಟಿಸ್‌ನಲ್ಲಿ ಕೇಳಿದ್ದಾರೆ.

ಸೂಕ್ತ ವಿವರ ನೀಡದಿದ್ದರೆ ಕಾನೂನುಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT