<p><strong>ಚಿಕ್ಕಬಳ್ಳಾಪುರ:</strong> ದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿಗಳ ಮೇಲೆ ಭಾನುವಾರ ರಾತ್ರಿ ದುಷ್ಕರ್ಮಿಗಳು ನಡೆಸಿದ ಹಲ್ಲೆಯನ್ನು ಖಂಡಿಸಿ ನಗರದಲ್ಲಿ ಸೋಮವಾರ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.</p>.<p>ಈ ವೇಳೆ ಮಾತನಾಡಿದ ಎನ್ಎಸ್ಯುಐ ರಾಜ್ಯ ಘಟಕದ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ‘ದೇಶದ ಅತ್ಯುನ್ನತ ಶಿಕ್ಷಣ ಸಂಸ್ಥೆಯಲ್ಲಿ ಎಬಿವಿಪಿ ಮೂಲಕ ಅದರ ಮಾತೃಸಂಸ್ಥೆ ಸಂಘ ಪರಿವಾರವು ಗೂಂಡಾಗಿರಿಗೆ ಪ್ರಚೋದನೆ ನಡೆಸುವ ಮೂಲಕ ಗೂಂಡಾ ಸಂಸ್ಕೃತಿಯನ್ನು ಬಿತ್ತುತ್ತಿದೆ. ಈ ಪ್ರಕರಣದ ಬಗ್ಗೆ ಕೂಡಲೇ ತನಿಖೆ ನಡೆಸಿ ಕಠಿಣ ಶಿಕ್ಷೆ ವಿಧಿಸಬೇಕು. ಎಬಿವಿಪಿಯ ಗೂಂಡಾ ಸಂಸ್ಕೃತಿ ಕೊನೆಯಾಗಬೇಕು’ ಎಂದು ಹೇಳಿದರು.</p>.<p>‘ಜೆಎನ್ಯು ವಿದ್ಯಾರ್ಥಿ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಎಬಿವಿಪಿ ಸಂಘಟನೆಯ ಕಾರ್ಯಕರ್ತರೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದಿದ್ದರೂ ದೆಹಲಿ ಪೊಲೀಸರು ಅವರನ್ನು ತಡೆಯುವ ಪ್ರಯತ್ನ ಮಾಡಿಲ್ಲ. ಇದನ್ನು ಗಮನಿಸಿದಾಗ ಇದೊಂದು ಕೇಂದ್ರ ಸರ್ಕಾರದ ಪೂರ್ವಯೋಜಿತ ಸಂಚು ಎಂಬ ಸಂಶಯ ವ್ಯಕ್ತವಾಗುತ್ತದೆ’ ಎಂದು ತಿಳಿಸಿದರು.</p>.<p>‘ಜೆಎನ್ಯು ವಿದ್ಯಾರ್ಥಿಗಳು ಎಲ್ಲ ಅಡೆತಡೆಗಳನ್ನು ಮೀರಿ ಎರಡು ತಿಂಗಳಿನಿಂದ ಶುಲ್ಕ ಹೆಚ್ಚಳ ವಿರೋಧಿಸಿ ಹೋರಾಟ ನಡೆಸುತ್ತಿದ್ದಾರೆ. ಆಡಳಿತ ವರ್ಗದ ಸಹಕಾರದೊಂದಿಗೆ ಕೋಮುವಾದಿ ಎಬಿವಿಪಿ ನಡೆಸಿದ ಈ ದಾಳಿಯು ಆಡಳಿತವರ್ಗದ ಹೊಣೆಗೇಡಿತನವನ್ನು ತೋರಿಸುತ್ತದೆ. ಶುಲ್ಕ ಹೆಚ್ಚಳ ವಿರೋಧಿ ಹೋರಾಟದ ದಿಕ್ಕು ತಪ್ಪಿಸಲು ಮತ್ತು ವಿದ್ಯಾರ್ಥಿ ಸಮುದಾಯದಲ್ಲಿ ಭಯ ಮೂಡಿಸಲು ಜೆಎನ್ಯು ಆಡಳಿತ ವರ್ಗ ಮತ್ತು ಎಬಿವಿಪಿ ಈ ಕುತಂತ್ರವನ್ನು ಹೆಣೆದಿವೆ’ ಎಂದು ಆರೋಪಿಸಿದರು.</p>.<p>‘ಕಿಡಿಗೇಡಿಗಳ ದಾಳಿಯಲ್ಲಿ ಜೆಎನ್ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸೇರಿದಂತೆ ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಶಿಕ್ಷಕರು ಕೂಡ ಹಲ್ಲೆಗೆ ಒಳಗಾಗಿದ್ದಾರೆ. ವಿ.ವಿ.ಯ ಆಸ್ತಿಯನ್ನೂ ಹಾಳು ಮಾಡಲಾಗಿದೆ. ದೆಹಲಿ ಪೊಲೀಸರು ಮೂಕ ಪ್ರೇಕ್ಷಕರಾಗುವ ಮೂಲಕ ಈ ದುಷ್ಕೃತ್ಯಕ್ಕೆ ಸಹಕಾರ ನೀಡಿರುವುದು ಖಂಡನೀಯ’ ಎಂದರು.</p>.<p>‘ದೆಹಲಿಯ ಕಾನೂನು ಸುವ್ಯವಸ್ಥೆ ಯ ಜವಾಬ್ದಾರಿ ಹೊಂದಿರುವ ಕೇಂದ್ರ ಗೃಹ ಇಲಾಖೆ ಇದಕ್ಕೆ ಉತ್ತರ ಕೊಡಬೇಕು. ಗೂಂಡಾಗಿರಿ ನಡೆಸಿದವರನ್ನು ಕೂಡಲೇ ಬಂಧಿಸಿ ಜೈಲಿಗಟ್ಟಬೇಕು. ವಿಶ್ವವಿದ್ಯಾಲಯದ ಕುಲಪತಿ ಈ ಕೃತ್ಯಕ್ಕೆ ಹೊಣೆ ಹೊರಬೇಕು’ ಎಂದು ಹೇಳಿದರು.</p>.<p>ಪ್ರತಿಭಟನಾಕಾರರು ಉಪ ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿ ಮುಖಂಡರಾದ ಆಯುಷ್, ನಂದೀಶ್, ರೂಪಾ, ನೇತ್ರಾ, ಮನೋಜ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿಗಳ ಮೇಲೆ ಭಾನುವಾರ ರಾತ್ರಿ ದುಷ್ಕರ್ಮಿಗಳು ನಡೆಸಿದ ಹಲ್ಲೆಯನ್ನು ಖಂಡಿಸಿ ನಗರದಲ್ಲಿ ಸೋಮವಾರ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.</p>.<p>ಈ ವೇಳೆ ಮಾತನಾಡಿದ ಎನ್ಎಸ್ಯುಐ ರಾಜ್ಯ ಘಟಕದ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ‘ದೇಶದ ಅತ್ಯುನ್ನತ ಶಿಕ್ಷಣ ಸಂಸ್ಥೆಯಲ್ಲಿ ಎಬಿವಿಪಿ ಮೂಲಕ ಅದರ ಮಾತೃಸಂಸ್ಥೆ ಸಂಘ ಪರಿವಾರವು ಗೂಂಡಾಗಿರಿಗೆ ಪ್ರಚೋದನೆ ನಡೆಸುವ ಮೂಲಕ ಗೂಂಡಾ ಸಂಸ್ಕೃತಿಯನ್ನು ಬಿತ್ತುತ್ತಿದೆ. ಈ ಪ್ರಕರಣದ ಬಗ್ಗೆ ಕೂಡಲೇ ತನಿಖೆ ನಡೆಸಿ ಕಠಿಣ ಶಿಕ್ಷೆ ವಿಧಿಸಬೇಕು. ಎಬಿವಿಪಿಯ ಗೂಂಡಾ ಸಂಸ್ಕೃತಿ ಕೊನೆಯಾಗಬೇಕು’ ಎಂದು ಹೇಳಿದರು.</p>.<p>‘ಜೆಎನ್ಯು ವಿದ್ಯಾರ್ಥಿ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಎಬಿವಿಪಿ ಸಂಘಟನೆಯ ಕಾರ್ಯಕರ್ತರೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದಿದ್ದರೂ ದೆಹಲಿ ಪೊಲೀಸರು ಅವರನ್ನು ತಡೆಯುವ ಪ್ರಯತ್ನ ಮಾಡಿಲ್ಲ. ಇದನ್ನು ಗಮನಿಸಿದಾಗ ಇದೊಂದು ಕೇಂದ್ರ ಸರ್ಕಾರದ ಪೂರ್ವಯೋಜಿತ ಸಂಚು ಎಂಬ ಸಂಶಯ ವ್ಯಕ್ತವಾಗುತ್ತದೆ’ ಎಂದು ತಿಳಿಸಿದರು.</p>.<p>‘ಜೆಎನ್ಯು ವಿದ್ಯಾರ್ಥಿಗಳು ಎಲ್ಲ ಅಡೆತಡೆಗಳನ್ನು ಮೀರಿ ಎರಡು ತಿಂಗಳಿನಿಂದ ಶುಲ್ಕ ಹೆಚ್ಚಳ ವಿರೋಧಿಸಿ ಹೋರಾಟ ನಡೆಸುತ್ತಿದ್ದಾರೆ. ಆಡಳಿತ ವರ್ಗದ ಸಹಕಾರದೊಂದಿಗೆ ಕೋಮುವಾದಿ ಎಬಿವಿಪಿ ನಡೆಸಿದ ಈ ದಾಳಿಯು ಆಡಳಿತವರ್ಗದ ಹೊಣೆಗೇಡಿತನವನ್ನು ತೋರಿಸುತ್ತದೆ. ಶುಲ್ಕ ಹೆಚ್ಚಳ ವಿರೋಧಿ ಹೋರಾಟದ ದಿಕ್ಕು ತಪ್ಪಿಸಲು ಮತ್ತು ವಿದ್ಯಾರ್ಥಿ ಸಮುದಾಯದಲ್ಲಿ ಭಯ ಮೂಡಿಸಲು ಜೆಎನ್ಯು ಆಡಳಿತ ವರ್ಗ ಮತ್ತು ಎಬಿವಿಪಿ ಈ ಕುತಂತ್ರವನ್ನು ಹೆಣೆದಿವೆ’ ಎಂದು ಆರೋಪಿಸಿದರು.</p>.<p>‘ಕಿಡಿಗೇಡಿಗಳ ದಾಳಿಯಲ್ಲಿ ಜೆಎನ್ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸೇರಿದಂತೆ ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಶಿಕ್ಷಕರು ಕೂಡ ಹಲ್ಲೆಗೆ ಒಳಗಾಗಿದ್ದಾರೆ. ವಿ.ವಿ.ಯ ಆಸ್ತಿಯನ್ನೂ ಹಾಳು ಮಾಡಲಾಗಿದೆ. ದೆಹಲಿ ಪೊಲೀಸರು ಮೂಕ ಪ್ರೇಕ್ಷಕರಾಗುವ ಮೂಲಕ ಈ ದುಷ್ಕೃತ್ಯಕ್ಕೆ ಸಹಕಾರ ನೀಡಿರುವುದು ಖಂಡನೀಯ’ ಎಂದರು.</p>.<p>‘ದೆಹಲಿಯ ಕಾನೂನು ಸುವ್ಯವಸ್ಥೆ ಯ ಜವಾಬ್ದಾರಿ ಹೊಂದಿರುವ ಕೇಂದ್ರ ಗೃಹ ಇಲಾಖೆ ಇದಕ್ಕೆ ಉತ್ತರ ಕೊಡಬೇಕು. ಗೂಂಡಾಗಿರಿ ನಡೆಸಿದವರನ್ನು ಕೂಡಲೇ ಬಂಧಿಸಿ ಜೈಲಿಗಟ್ಟಬೇಕು. ವಿಶ್ವವಿದ್ಯಾಲಯದ ಕುಲಪತಿ ಈ ಕೃತ್ಯಕ್ಕೆ ಹೊಣೆ ಹೊರಬೇಕು’ ಎಂದು ಹೇಳಿದರು.</p>.<p>ಪ್ರತಿಭಟನಾಕಾರರು ಉಪ ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿ ಮುಖಂಡರಾದ ಆಯುಷ್, ನಂದೀಶ್, ರೂಪಾ, ನೇತ್ರಾ, ಮನೋಜ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>