ಮುನಿರಾಜು (40) ಆತ್ಮಹತ್ಯೆ ಮಾಡಿಕೊಂಡ ರೈತ. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಕೃಷಿಯಿಂದ ಜೀವನ ನಡೆಸುತ್ತಿದ್ದರು. ಬೆಳೆ ಕೈಕೊಟ್ಟಿದ್ದರಿಂದ ಕಂಗಾಲಾಗಿದ್ದರು. ಎರಡು ಕೊಳವೆಬಾವಿ ಕೊರೆಯಿಸಿ 5 ಎಕರೆ ಪ್ರದೇಶದಲ್ಲಿ ಟೊಮೆಟೊ ಮತ್ತಿತರ ಬೆಳೆ ಬೆಳೆದಿದ್ದರು. ಬೆಲೆ ಕುಸಿತದಿಂದ ಸಾಲದ ಸುಳಿಗೆ ಸಿಲುಕಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.