‘ಪ್ರತಿದಿನ ಡೆತ್ ಆಡಿಟ್ ಮಾಡಬೇಕು. ಇದರಿಂದ ಸಾವಿನ ಕಾರಣಗಳನ್ನು ತಿಳಿದು ಕೊಳ್ಳಲು ಸಾಧ್ಯವಾಗುತ್ತದೆ.
ಕೋವಿಡ್ಯೇತರ ಡೆಂಗಿ ಸಹಿತ ಇತರೆ ಸಾಂಕ್ರಾಮಿಕ ರೋಗಗಳ ಬಗ್ಗೆ ಗಮನಹರಿಸಬೇಕು. ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆಗೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ಒಟ್ಟು 98 ಡಯಾಲಿಸಿಸ್ ರೋಗಿಗಳಿದ್ದಾರೆ. ಅವರಿಗೆ ಸರಿಯಾಗಿ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು. ಕೋವಿಡ್ ಆಸ್ಪತ್ರೆಯಲ್ಲಿ ಒಂದು ಡಯಾಲಿಸಿಸ್ ಯಂತ್ರ ಅಳವಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.