<p>ಶಿಡ್ಲಘಟ್ಟ: ‘ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲಾ ಮಕ್ಕಳು 625ಕ್ಕೆ 625 ಅಂಕ ಗಳಿಸಿದರೆ ಅವರಿಗೆ ₹1 ಲಕ್ಷ ಹಾಗೂ ಆ ಶಾಲಾ ಶಿಕ್ಷಕರಿಗೆ ಸೂಕ್ತ ಬಹುಮಾನ ನೀಡಲಾಗುವುದು’ ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಕೊಂಡಪ್ಪಗಾರಹಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಆಯೋಜಿಸಿದ್ದ 2026ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರ ಮತ್ತು ಪೂರ್ವ ಸಿದ್ಧತಾ ಪರೀಕ್ಷೆ 1-2ರ ಫಲಿತಾಂಶ ವಿಶ್ಲೇಷಣೆ ಬಗ್ಗೆ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು.</p>.<p>‘ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು 625 ಅಂಕ ಪಡೆಯುತ್ತಾರೋ ಅಷ್ಟು ವಿದ್ಯಾರ್ಥಿಗಳಿಗೂ ಬಹುಮಾನ ನೀಡುತ್ತೇನೆ. ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಶಿಡ್ಲಘಟ್ಟ ಮೂರನೇ ಸ್ಥಾನ ಹಾಗೂ ಕಳೆದ ಬಾರಿ ಎರಡನೇ ಸ್ಥಾನ ಪಡೆದಿತ್ತು. ಈ ಬಾರಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಬೇಕು’ ಎಂದರು.</p>.<p>‘ನಾನು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಿದ್ದೇನೆ. ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಚಿಂತಾಮಣಿಯ ಡಾ.ಎಂ.ಸಿ ಸುಧಾಕರ್ ಉತ್ತಮ ವಿದ್ಯಾಭ್ಯಾಸ ಮಾಡಿದ್ದಾರೆ. ಜಿಲ್ಲೆಯ ಶಾಸಕರ ಪೈಕಿ ಕಡಿಮೆ ಓದಿರುವುದು ನಾನೇ. ನಾನು ಓದಿರುವುದು ಕೇವಲ 7ನೇ ತರಗತಿ. ನಾನು ಪಡೆಯದ ಶಿಕ್ಷಣವನ್ನು ಈ ಕ್ಷೇತ್ರದ ಎಲ್ಲ ಮಕ್ಕಳು ಪಡೆಯಬೇಕು’ ಎಂದು ಹೇಳಿದರು.</p>.<p>ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಮೇಶ್ ಮಾತನಾಡಿ, ‘ಜಿಲ್ಲೆಯು ಈ ಹಿಂದೆ ಮೊದಲನೇ ಸ್ಥಾನ ಗಳಿಸಿದೆ. ಕಳೆದ ಬಾರಿ 22ನೇ ಸ್ಥಾನ ಪಡೆದು ಹಿನ್ನಡೆ ಅನುಭವಿಸಿದೆ. ಹಾಗಾಗಿ ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಯು ಕನಿಷ್ಠ 10 ಒಳಗೆ 8, 7, 6ನೇ ಸ್ಥಾನಗಳಿಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಮ್ಮ ಚಿಕ್ಕಬಳ್ಳಾಪುರ ಜಿಲ್ಲೆಯು ಶೇಕಡಾ 95, 96 ರಷ್ಟು ಫಲಿತಾಂಶ ಬರಬೇಕು ಎನ್ನುವ ಗುರಿಯನ್ನು ಹೊಂದಿರಬೇಕು’ ಎಂದರು.</p>.<p>ಇಒ ಆರ್. ಹೇಮಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರ ಕುಮಾರ್, ಇಸಿಒ ಮಂಜುನಾಥ್, ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ವಿಷಯ ಪರಿವೀಕ್ಷಕ ಆಂಜಿನಪ್ಪ, ಬಿಆರ್ಸಿ ಪ್ರಸನ್ನ ಕುಮಾರ್, ಎಲ್.ವಿ. ವೆಂಕಟರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ‘ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲಾ ಮಕ್ಕಳು 625ಕ್ಕೆ 625 ಅಂಕ ಗಳಿಸಿದರೆ ಅವರಿಗೆ ₹1 ಲಕ್ಷ ಹಾಗೂ ಆ ಶಾಲಾ ಶಿಕ್ಷಕರಿಗೆ ಸೂಕ್ತ ಬಹುಮಾನ ನೀಡಲಾಗುವುದು’ ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಕೊಂಡಪ್ಪಗಾರಹಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಆಯೋಜಿಸಿದ್ದ 2026ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರ ಮತ್ತು ಪೂರ್ವ ಸಿದ್ಧತಾ ಪರೀಕ್ಷೆ 1-2ರ ಫಲಿತಾಂಶ ವಿಶ್ಲೇಷಣೆ ಬಗ್ಗೆ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು.</p>.<p>‘ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು 625 ಅಂಕ ಪಡೆಯುತ್ತಾರೋ ಅಷ್ಟು ವಿದ್ಯಾರ್ಥಿಗಳಿಗೂ ಬಹುಮಾನ ನೀಡುತ್ತೇನೆ. ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಶಿಡ್ಲಘಟ್ಟ ಮೂರನೇ ಸ್ಥಾನ ಹಾಗೂ ಕಳೆದ ಬಾರಿ ಎರಡನೇ ಸ್ಥಾನ ಪಡೆದಿತ್ತು. ಈ ಬಾರಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಬೇಕು’ ಎಂದರು.</p>.<p>‘ನಾನು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಿದ್ದೇನೆ. ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಚಿಂತಾಮಣಿಯ ಡಾ.ಎಂ.ಸಿ ಸುಧಾಕರ್ ಉತ್ತಮ ವಿದ್ಯಾಭ್ಯಾಸ ಮಾಡಿದ್ದಾರೆ. ಜಿಲ್ಲೆಯ ಶಾಸಕರ ಪೈಕಿ ಕಡಿಮೆ ಓದಿರುವುದು ನಾನೇ. ನಾನು ಓದಿರುವುದು ಕೇವಲ 7ನೇ ತರಗತಿ. ನಾನು ಪಡೆಯದ ಶಿಕ್ಷಣವನ್ನು ಈ ಕ್ಷೇತ್ರದ ಎಲ್ಲ ಮಕ್ಕಳು ಪಡೆಯಬೇಕು’ ಎಂದು ಹೇಳಿದರು.</p>.<p>ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಮೇಶ್ ಮಾತನಾಡಿ, ‘ಜಿಲ್ಲೆಯು ಈ ಹಿಂದೆ ಮೊದಲನೇ ಸ್ಥಾನ ಗಳಿಸಿದೆ. ಕಳೆದ ಬಾರಿ 22ನೇ ಸ್ಥಾನ ಪಡೆದು ಹಿನ್ನಡೆ ಅನುಭವಿಸಿದೆ. ಹಾಗಾಗಿ ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಯು ಕನಿಷ್ಠ 10 ಒಳಗೆ 8, 7, 6ನೇ ಸ್ಥಾನಗಳಿಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಮ್ಮ ಚಿಕ್ಕಬಳ್ಳಾಪುರ ಜಿಲ್ಲೆಯು ಶೇಕಡಾ 95, 96 ರಷ್ಟು ಫಲಿತಾಂಶ ಬರಬೇಕು ಎನ್ನುವ ಗುರಿಯನ್ನು ಹೊಂದಿರಬೇಕು’ ಎಂದರು.</p>.<p>ಇಒ ಆರ್. ಹೇಮಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರ ಕುಮಾರ್, ಇಸಿಒ ಮಂಜುನಾಥ್, ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ವಿಷಯ ಪರಿವೀಕ್ಷಕ ಆಂಜಿನಪ್ಪ, ಬಿಆರ್ಸಿ ಪ್ರಸನ್ನ ಕುಮಾರ್, ಎಲ್.ವಿ. ವೆಂಕಟರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>