‘ಈ ಅವಧಿಯಲ್ಲಿ ಜನ ಗುಂಪು ಸೇರುವುದು, ಸಂತೆ, ಜಾತ್ರೆ, ಕಾರ್ಯಗಳನ್ನು ನಡೆಸುವುದು ನಿರ್ಬಂಧಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಂದೇ ಒಂದು ಕೊರೊನಾ ವೈರಸ್ ಸೋಂಕು ಪ್ರಕರಣ ವರದಿಯಾಗಿಲ್ಲ. ಎಲ್ಲ ವೈದ್ಯಕೀಯ ಸಿಬ್ಬಂದಿ ಮುಂಜಾಗ್ರತೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.