<p><strong>ಗುಡಿಬಂಡೆ: </strong>‘ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಬಡಜನರಿಗೆ ಉಚಿತವಾಗಿ ನೀರು ನೀಡುತ್ತಿರುವುದು ಶ್ಲಾಘನೀಯ. ಇಂತಹ ಒಳ್ಳೆಯ ಕಾರ್ಯಕ್ರಮಗಳಿಗೆ ನಾನು ಪ್ರೋತ್ಸಾಹ ನೀಡುತ್ತೇನೆ’ ಎಂದು ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದರು.</p>.<p>ಪಟ್ಟಣದ 5ನೇ ವಾರ್ಡ್ನ ತಿರುಮಲನಗರದ ಮಸೀದಿಯಲ್ಲಿ ಮದೀನಾ ಮಸ್ಜಿದ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ₹ 15 ಲಕ್ಷ ವೆಚ್ಚದಡಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು.</p>.<p>ಈ ಭಾಗದಲ್ಲಿ ಫ್ಲೋರೈಡ್ ಸಮಸ್ಯೆ ಹೆಚ್ಚಾಗಿದೆ. ಜನರು ಈ ನೀರು ಕುಡಿದು ಹಲವು ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ತಿರುಮಲನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡಜನರು ಇದ್ದಾರೆ. ಇಲ್ಲಿನ ಜನರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ನಿಜಕ್ಕೂ ಸಂತೋಷದ ವಿಷಯ ಎಂದರು.</p>.<p>ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮಾತನಾಡಿ, ಮದೀನಾ ಮಸ್ಜಿದ್ ಚಾರಿಟೇಬಲ್ ಟ್ರಸ್ಟ್ ಬಡವರ ಬಗ್ಗೆ ಕಾಳಜಿವಹಿಸಿ ಉತ್ತಮ ಕೆಲಸ ಮಾಡುತ್ತಿದೆ. ಇದರಂತೆ ಸಂಘ– ಸಂಸ್ಥೆಗಳು ಮುಂದೆ ಬರಬೇಕು. ಇಂತಹ ಕಾರ್ಯಗಳಿಗೆ ಸಹಕಾರ ನೀಡಲು ಸದಾ ಸಿದ್ಧ ಎಂದು ತಿಳಿಸಿದರು.</p>.<p>ಟ್ರಸ್ಟ್ ಅಧ್ಯಕ್ಷ ಸೈಯದ್ ಮುನೀರ್ ಮಾತನಾಡಿ, ತಿರುಮಲನಗರದ ಅಭಿವೃದ್ಧಿಯ ದೃಷ್ಟಿಯಿಂದ ಮಸೀದಿ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲಾಗಿದೆ. ಲಾಕ್ಡೌನ್ ಸಮಯದಲ್ಲಿ 500ಕ್ಕೂ ಹೆಚ್ಚು ಆಹಾರ ಕಿಟ್ ವಿತರಣೆ ಮಾಡಲಾಗಿತ್ತು ಎಂದರು.</p>.<p>ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ವೈ. ಸೈಯದ್ ಅಹಮದ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ತಾಲ್ಲೂಕು ಅಧ್ಯಕ್ಷ ಸೈಯದ್ ಮಸ್ಸೂರ್, ಪ.ಪಂ. ಮಾಜಿ ಅಧ್ಯಕ್ಷ ರಿಯಾಜ್ ಪಾಷ, ಮುಖಂಡರಾದಅಲ್ತಾಫ್ ಪಾಷ, ಅಮರನಾಥರೆಡ್ಡಿ, ರಮೇಶ್ ಬಾಬು, ಲಕ್ಷ್ಮೀಕಾಂತಮ್ಮ, ಚಾಂದ್ ಪಾಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ: </strong>‘ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಬಡಜನರಿಗೆ ಉಚಿತವಾಗಿ ನೀರು ನೀಡುತ್ತಿರುವುದು ಶ್ಲಾಘನೀಯ. ಇಂತಹ ಒಳ್ಳೆಯ ಕಾರ್ಯಕ್ರಮಗಳಿಗೆ ನಾನು ಪ್ರೋತ್ಸಾಹ ನೀಡುತ್ತೇನೆ’ ಎಂದು ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದರು.</p>.<p>ಪಟ್ಟಣದ 5ನೇ ವಾರ್ಡ್ನ ತಿರುಮಲನಗರದ ಮಸೀದಿಯಲ್ಲಿ ಮದೀನಾ ಮಸ್ಜಿದ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ₹ 15 ಲಕ್ಷ ವೆಚ್ಚದಡಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು.</p>.<p>ಈ ಭಾಗದಲ್ಲಿ ಫ್ಲೋರೈಡ್ ಸಮಸ್ಯೆ ಹೆಚ್ಚಾಗಿದೆ. ಜನರು ಈ ನೀರು ಕುಡಿದು ಹಲವು ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ತಿರುಮಲನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡಜನರು ಇದ್ದಾರೆ. ಇಲ್ಲಿನ ಜನರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ನಿಜಕ್ಕೂ ಸಂತೋಷದ ವಿಷಯ ಎಂದರು.</p>.<p>ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮಾತನಾಡಿ, ಮದೀನಾ ಮಸ್ಜಿದ್ ಚಾರಿಟೇಬಲ್ ಟ್ರಸ್ಟ್ ಬಡವರ ಬಗ್ಗೆ ಕಾಳಜಿವಹಿಸಿ ಉತ್ತಮ ಕೆಲಸ ಮಾಡುತ್ತಿದೆ. ಇದರಂತೆ ಸಂಘ– ಸಂಸ್ಥೆಗಳು ಮುಂದೆ ಬರಬೇಕು. ಇಂತಹ ಕಾರ್ಯಗಳಿಗೆ ಸಹಕಾರ ನೀಡಲು ಸದಾ ಸಿದ್ಧ ಎಂದು ತಿಳಿಸಿದರು.</p>.<p>ಟ್ರಸ್ಟ್ ಅಧ್ಯಕ್ಷ ಸೈಯದ್ ಮುನೀರ್ ಮಾತನಾಡಿ, ತಿರುಮಲನಗರದ ಅಭಿವೃದ್ಧಿಯ ದೃಷ್ಟಿಯಿಂದ ಮಸೀದಿ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲಾಗಿದೆ. ಲಾಕ್ಡೌನ್ ಸಮಯದಲ್ಲಿ 500ಕ್ಕೂ ಹೆಚ್ಚು ಆಹಾರ ಕಿಟ್ ವಿತರಣೆ ಮಾಡಲಾಗಿತ್ತು ಎಂದರು.</p>.<p>ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ವೈ. ಸೈಯದ್ ಅಹಮದ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ತಾಲ್ಲೂಕು ಅಧ್ಯಕ್ಷ ಸೈಯದ್ ಮಸ್ಸೂರ್, ಪ.ಪಂ. ಮಾಜಿ ಅಧ್ಯಕ್ಷ ರಿಯಾಜ್ ಪಾಷ, ಮುಖಂಡರಾದಅಲ್ತಾಫ್ ಪಾಷ, ಅಮರನಾಥರೆಡ್ಡಿ, ರಮೇಶ್ ಬಾಬು, ಲಕ್ಷ್ಮೀಕಾಂತಮ್ಮ, ಚಾಂದ್ ಪಾಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>