<p><strong>ಗುಡಿಬಂಡೆ: </strong>ಪಟ್ಟಣದ ವ್ಯಾಪ್ತಿಯಲ್ಲಿ ಮ್ಯಾನುಯಲ್ ಸ್ಯ್ಕಾವೆಂಜಿಂಗ್ ಕೆಲಸ ಮಾಡುವ ವ್ಯಕ್ತಿಗಳನ್ನು ಗುರುತಿಸಲು ಸಮೀಕ್ಷಾ ಶಿಬಿರ ಆಯೋಜಿಸಲಾಗಿದೆ.</p>.<p>ಕಳೆದ ಡಿ. 18ವರೆಗೆಮ್ಯಾನುಯಲ್ ಸ್ಯ್ಕಾವೆಂಜಿಂಗ್ ಕೆಲಸ ಮಾಡುವವರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ, ಇದುವರೆಗೆ ಯಾರೊಬ್ಬರು ಅರ್ಜಿ ಸಲ್ಲಿಸಿಲ್ಲ. ಈ ಕುರಿತು ಏನಾದರೂ ಆಕ್ಷೇಪಣೆ ಇದ್ದರೆ ಅಗತ್ಯ ದಾಖಲೆಗಳೊಂದಿಗೆ ಫೆ. 14 ರೊಳಗೆ ಕಚೇರಿಗೆ ಸಲ್ಲಿಸಬಹುದು ಎಂದು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ರಾಜಶೇಖರ್ ತಿಳಿಸಿದ್ದಾರೆ.</p>.<p class="Briefhead"><strong>ಕೆಡಿಪಿ ಸಭೆ ಇಂದು</strong></p>.<p>ಗುಡಿಬಂಡೆ: ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಫೆ. 11ರಂದು ಬೆಳಿಗ್ಗೆ 11ಗಂಟೆಗೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಲಿದೆ. ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಅನುಪಾಲನಾ ವರದಿಯೊಂದಿಗೆ ಹಾಜರಾಗಬೇಕು ಎಂದು ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ತಿಳಿಸಿದ್ದಾರೆ.</p>.<p class="Briefhead"><strong>ಕೈವಾರ: ಹಸಿರು ಪದ ಗಾಯನ</strong></p>.<p>ಚಿಂತಾಮಣಿ: ನಗರದ ಬೇರು ಬೆವರು ಕಲಾ ಬಳಗದಿಂದ ಫೆ. 12ರಂದು ಶನಿವಾರ ಬೆಳಿಗ್ಗೆ 10ಗಂಟೆಗೆ ಕೈವಾರದ ಶ್ರೀಯೋಗಿನಾರೇಯಣ ತಪೋವನ ಗವಿಯಲ್ಲಿ ‘ಹಸಿರು ಪದಗಳ’ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ಕಾರ್ಯಕ್ರಮದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ‘ಪರಿಸರದ ಕಥೆ’ ಕುರಿತು ಚರ್ಚೆ-ಮಂಥನ ನಡೆಯಲಿದೆ. ಸಾಂಸ್ಕೃತಿಕ ಚಿಂತಕ ಕೋಟಿಗಾನಹಳ್ಳಿ ರಾಮಯ್ಯ, ಕವಿ ಶಶಿರಾಜ್ ಹರತಲೆ, ಪರಿಸರವಾದಿ ಚೌಡಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ: </strong>ಪಟ್ಟಣದ ವ್ಯಾಪ್ತಿಯಲ್ಲಿ ಮ್ಯಾನುಯಲ್ ಸ್ಯ್ಕಾವೆಂಜಿಂಗ್ ಕೆಲಸ ಮಾಡುವ ವ್ಯಕ್ತಿಗಳನ್ನು ಗುರುತಿಸಲು ಸಮೀಕ್ಷಾ ಶಿಬಿರ ಆಯೋಜಿಸಲಾಗಿದೆ.</p>.<p>ಕಳೆದ ಡಿ. 18ವರೆಗೆಮ್ಯಾನುಯಲ್ ಸ್ಯ್ಕಾವೆಂಜಿಂಗ್ ಕೆಲಸ ಮಾಡುವವರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ, ಇದುವರೆಗೆ ಯಾರೊಬ್ಬರು ಅರ್ಜಿ ಸಲ್ಲಿಸಿಲ್ಲ. ಈ ಕುರಿತು ಏನಾದರೂ ಆಕ್ಷೇಪಣೆ ಇದ್ದರೆ ಅಗತ್ಯ ದಾಖಲೆಗಳೊಂದಿಗೆ ಫೆ. 14 ರೊಳಗೆ ಕಚೇರಿಗೆ ಸಲ್ಲಿಸಬಹುದು ಎಂದು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ರಾಜಶೇಖರ್ ತಿಳಿಸಿದ್ದಾರೆ.</p>.<p class="Briefhead"><strong>ಕೆಡಿಪಿ ಸಭೆ ಇಂದು</strong></p>.<p>ಗುಡಿಬಂಡೆ: ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಫೆ. 11ರಂದು ಬೆಳಿಗ್ಗೆ 11ಗಂಟೆಗೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಲಿದೆ. ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಅನುಪಾಲನಾ ವರದಿಯೊಂದಿಗೆ ಹಾಜರಾಗಬೇಕು ಎಂದು ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ತಿಳಿಸಿದ್ದಾರೆ.</p>.<p class="Briefhead"><strong>ಕೈವಾರ: ಹಸಿರು ಪದ ಗಾಯನ</strong></p>.<p>ಚಿಂತಾಮಣಿ: ನಗರದ ಬೇರು ಬೆವರು ಕಲಾ ಬಳಗದಿಂದ ಫೆ. 12ರಂದು ಶನಿವಾರ ಬೆಳಿಗ್ಗೆ 10ಗಂಟೆಗೆ ಕೈವಾರದ ಶ್ರೀಯೋಗಿನಾರೇಯಣ ತಪೋವನ ಗವಿಯಲ್ಲಿ ‘ಹಸಿರು ಪದಗಳ’ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ಕಾರ್ಯಕ್ರಮದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ‘ಪರಿಸರದ ಕಥೆ’ ಕುರಿತು ಚರ್ಚೆ-ಮಂಥನ ನಡೆಯಲಿದೆ. ಸಾಂಸ್ಕೃತಿಕ ಚಿಂತಕ ಕೋಟಿಗಾನಹಳ್ಳಿ ರಾಮಯ್ಯ, ಕವಿ ಶಶಿರಾಜ್ ಹರತಲೆ, ಪರಿಸರವಾದಿ ಚೌಡಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>