<p><strong>ಚಿಕ್ಕಬಳ್ಳಾಪುರ: </strong>ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಕೋವಿಡ್ ಸೋಂಕಿತ ಮಹಿಳೆಯ ಅಂತ್ಯಕ್ರಿಯೆ ನಡೆಸಲು ಶುಕ್ರವಾರ ನಗರದ ಪ್ರಶಾಂತ್ ನಗರದಲ್ಲಿರುವ ಮುಸ್ಲಿಮರ ಸ್ಮಶಾನದ ಸುತ್ತಲಿನ ನಿವಾಸಿಗಳು ವಿರೋಧ ವ್ಯಕ್ತಪಡಿಸಿದರು.</p>.<p>ಕಾರ್ಖಾನೆ ಪೇಟೆ ರಸ್ತೆ ನಿವಾಸಿ, 56 ವಯಸ್ಸಿನ ಮಹಿಳೆ ಶುಕ್ರವಾರ ಬೆಳಿಗ್ಗೆ ಕೋವಿಡ್ ವಾರ್ಡ್ನಲ್ಲಿ ಮೃತಪಟ್ಟಿದ್ದರು. ಸರ್ಕಾರದ ಮಾರ್ಗಸೂಚಿ ಅನುಸಾರವೇ ಅವರ ಪ್ರಶಾಂತ್ ನಗರದಲ್ಲಿರುವ ಮುಸ್ಲಿಮರ ಸ್ಮಶಾನದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದರು.</p>.<p>ಈ ವಿಚಾರ ತಿಳಿಯುತ್ತಲೇ ಸ್ಥಳೀಯ ಜನರು ಸ್ಮಶಾನಕ್ಕೆ ಬಂದು ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿದರು. ತಹಶೀಲ್ದಾರ್, ಉಪವಿಭಾಗಾಧಿಕಾರಿ ಸ್ಥಳಕ್ಕೆ ಬಂದು, ಜಿಲ್ಲಾಧಿಕಾರಿ ದೂರವಾಣಿ ಮೂಲಕ ಜನರಿಗೆ ಮನವಿ ಮಾಡಿದರೂ ಸಾರ್ವಜನಿಕರು ಅಂತ್ಯಕ್ರಿಯೆಗೆ ಒಪ್ಪಲಿಲ್ಲ.</p>.<p>ಕೊನೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಎಂ.ಯೋಗೇಶ್ ಗೌಡ ಅವರು ಅಂತ್ಯಕ್ರಿಯೆ ವಿರೋಧಿಸುತ್ತಿದ್ದ ಜನರ ಮನವೊಲಿಸುವಲ್ಲಿ ಯಶಸ್ವಿಯಾದರು. ಬಳಿಕ ಆರೋಗ್ಯ ಇಲಾಖೆ ಸಿಬ್ಬಂದಿ ಅಂತ್ಯಕ್ರಿಯೆ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಕೋವಿಡ್ ಸೋಂಕಿತ ಮಹಿಳೆಯ ಅಂತ್ಯಕ್ರಿಯೆ ನಡೆಸಲು ಶುಕ್ರವಾರ ನಗರದ ಪ್ರಶಾಂತ್ ನಗರದಲ್ಲಿರುವ ಮುಸ್ಲಿಮರ ಸ್ಮಶಾನದ ಸುತ್ತಲಿನ ನಿವಾಸಿಗಳು ವಿರೋಧ ವ್ಯಕ್ತಪಡಿಸಿದರು.</p>.<p>ಕಾರ್ಖಾನೆ ಪೇಟೆ ರಸ್ತೆ ನಿವಾಸಿ, 56 ವಯಸ್ಸಿನ ಮಹಿಳೆ ಶುಕ್ರವಾರ ಬೆಳಿಗ್ಗೆ ಕೋವಿಡ್ ವಾರ್ಡ್ನಲ್ಲಿ ಮೃತಪಟ್ಟಿದ್ದರು. ಸರ್ಕಾರದ ಮಾರ್ಗಸೂಚಿ ಅನುಸಾರವೇ ಅವರ ಪ್ರಶಾಂತ್ ನಗರದಲ್ಲಿರುವ ಮುಸ್ಲಿಮರ ಸ್ಮಶಾನದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದರು.</p>.<p>ಈ ವಿಚಾರ ತಿಳಿಯುತ್ತಲೇ ಸ್ಥಳೀಯ ಜನರು ಸ್ಮಶಾನಕ್ಕೆ ಬಂದು ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿದರು. ತಹಶೀಲ್ದಾರ್, ಉಪವಿಭಾಗಾಧಿಕಾರಿ ಸ್ಥಳಕ್ಕೆ ಬಂದು, ಜಿಲ್ಲಾಧಿಕಾರಿ ದೂರವಾಣಿ ಮೂಲಕ ಜನರಿಗೆ ಮನವಿ ಮಾಡಿದರೂ ಸಾರ್ವಜನಿಕರು ಅಂತ್ಯಕ್ರಿಯೆಗೆ ಒಪ್ಪಲಿಲ್ಲ.</p>.<p>ಕೊನೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಎಂ.ಯೋಗೇಶ್ ಗೌಡ ಅವರು ಅಂತ್ಯಕ್ರಿಯೆ ವಿರೋಧಿಸುತ್ತಿದ್ದ ಜನರ ಮನವೊಲಿಸುವಲ್ಲಿ ಯಶಸ್ವಿಯಾದರು. ಬಳಿಕ ಆರೋಗ್ಯ ಇಲಾಖೆ ಸಿಬ್ಬಂದಿ ಅಂತ್ಯಕ್ರಿಯೆ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>