<p><strong>ಚಿಕ್ಕಬಳ್ಳಾಪುರ:</strong> ರೈತ ಸಮುದಾಯದ ಮರಣ ಶಾಸನದಂತಿರುವ ಕರ್ನಾಟಕ ಕೃಷಿ ಉತ್ಪನ್ನಗಳ ಮಾರಾಟ (ನಿಯಂತ್ರಣ ಮತ್ತು ಅಭಿವೃದ್ಧಿ)(ಎರಡನೇ ತಿದ್ದುಪಡಿ) ಮಸೂದೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಬುಧವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.</p>.<p>ಈ ವೇಳೆ ಮಾತನಾಡಿದ ರೈತಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ’ರಾಜ್ಯ ಸರ್ಕಾರ ರೈತ ಸಮುದಾಯಕ್ಕೆ ಅನುಕೂಲವಾಗುವ ರೀತಿಯಲ್ಲಿ ಕೃಷಿ ಉತ್ಪನ್ನಗಳ ಮಾರಾಟ ಹಾಗೂ ಖರೀದಿಗೆ ಇದ್ದ ನಿರ್ಬಂಧ ಸಡಿಲಿಸಿ, ಈ ಕ್ಷೇತ್ರದಲ್ಲಿ ಬೃಹತ್ ಕಾರ್ಪೊರೇಟ್ ಕಂಪನಿಗಳಿಗೆ ಅವಕಾಶ ಮಾಡಿಕೊಡಲು ಮುಂದಾಗಿದೆ‘ ಎಂದು ಹೇಳಿದರು.</p>.<p>’ತತ್ಕ್ಷಣವೇ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಈ ಸಂಬಂಧ ಕೇಂದ್ರಕ್ಕೆ ಮಾಹಿತಿ ಸಲ್ಲಿಸಬೇಕು ಎಂದು ಕೇಂದ್ರ ಕೃಷಿ ಸಚಿವಾಲಯ ರಾಜ್ಯಕ್ಕೆ ಪತ್ರ ಬರೆದಿತ್ತು. ಅದರ ಬೆನ್ನಲ್ಲೇ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ತರಾತುರಿಯಲ್ಲಿ ಮಸೂದೆಯನ್ನು ಜಾರಿಗೆ ತರಲು ಹೊರಟಿದೆ‘ ಎಂದು ತಿಳಿಸಿದರು.</p>.<p>’ಈ ಮಸೂದೆ ಕುರಿತಂತೆ ಸರ್ಕಾರ ಸಚಿವ ಸಂಪುಟದಲ್ಲಿ ಚರ್ಚೆಯನ್ನೂ ನಡೆಸದೇ ರಾತ್ರೋರಾತ್ರಿ ಸುಗ್ರೀವಾಜ್ಞೆ ಸಿದ್ಧಪಡಿಸಿ ಅನುಮೋದನೆಗಾಗಿ ರಾಜಭವನಕ್ಕೆ ಕಳುಹಿಸಿದೆ. ರಾಜ್ಯಪಾಲರು ಮಸೂದೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು ಮಂಡಿಸಿ ಎಂದು ವಾಪಾಸ್ ಕಳುಹಿಸಿದ್ದಾರೆ‘ ಎಂದರು.</p>.<p>’ಈಗಿರುವ 1966ರ ಎಪಿಎಂಸಿ ಕಾಯ್ದೆಯು ರೈತರ ಹಿತವನ್ನೇ ಪ್ರಧಾನವಾಗಿ ಹೊಂದಿದೆ. 1986ರಲ್ಲಿ ಇದಕ್ಕೆ ತಿದ್ದುಪಡಿ ತಂದು ಕಾಯ್ದೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗಿತ್ತು. ಒಂದೊಮ್ಮೆ ತಿದ್ದುಪಡಿ ಮಸೂದೆ ಜಾರಿಗೆ ಬಂದರೆ ರೈತರ ಶೋಷಣೆ ಹೆಚ್ಚಲಿದೆ‘ ಎಂದು ಹೇಳಿದರು.</p>.<p>’ಗ್ರಾಹಕರಿಗೆ ಸಂಸ್ಕರಿತ, ಪ್ಯಾಕೇಟ್ ಆಹಾರ, ಆಹಾರ ಪದಾರ್ಥಗಳನ್ನು ಪೂರೈಸುವ ವಾಲ್ ಮಾರ್ಟ್, ಜಿಯೋ ಮಾರ್ಕೆಟಿಂಗ್, ಅಮೆಜಾನ್, ಫ್ಲಿಪ್ಕಾರ್ಟ್ನಂತಹ ಕಾರ್ಪೊರೇಟ್ ಕಂಪನಿಗಳು, ಬಹುರಾಷ್ಟ್ರೀಯ ಕಂಪನಿಗಳಿಗೆ ಲಾಭ ಮಾಡಿಕೊಡುವ ಹುನ್ನಾರವಿದು‘ ಎಂದು ಆರೋಪಿಸಿದರು.</p>.<p>’ದೊಡ್ಡ ಕಂಪೆನಿಗಳು ಈವರೆಗೆ ಎಪಿಎಂಸಿಯಲ್ಲಿ ಪರವಾನಗಿ ಪಡೆದ ವ್ಯಾಪಾರಿಗಳಿಂದ ಕೃಷಿ ಉತ್ಪನ್ನಗಳನ್ನು ಖರೀದಿಸಬಹುದಿತ್ತು. ತಮ್ಮದೇ ಪ್ರಾಂಗಣ (ಯಾರ್ಡ್) ಹೊಂದಿರುವ ಕಂಪನಿಗಳು ರೈತರಿಂದ ಖರೀದಿ ಮಾಡಬೇಕಾದರೆ ಕೃಷಿ ಮಾರುಕಟ್ಟೆ ನಿರ್ದೇಶನಾಲಯದ ಜತೆ ಒಪ್ಪಂದ ಮಾಡಿಕೊಳ್ಳುವುದು ಕಡ್ಡಾಯವಾಗಿತ್ತು‘ ಎಂದು ಹೇಳಿದರು.</p>.<p>’ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಎಪಿಎಂಸಿ ಪ್ರಾಂಗಣದಿಂದ ಹೊರಗೆ ಅಥವಾ ಒಡಂಬಡಿಕೆಯ ಪ್ರಾಂಗಣ ಹೊಂದಿದವರು ಮಾತ್ರ ಖರೀದಿ ಮಾಡಬಹುದು ಎಂಬ ಷರತ್ತನ್ನು ತೆಗೆದು ಹಾಕಿ ಬಂಡವಾಳಶಾಹಿಗಳಿಗೆ ಅನುಕೂಲ ಕಲ್ಪಿಸಲು ಸರ್ಕಾರಗಳು ಮುಂದಾಗಿವೆ‘ ಎಂದು ತಿಳಿಸಿದರು.</p>.<p>ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಪಿ.ರಾಮನಾಥ್, ತಾಲ್ಲೂಕು ಘಟಕಗಳ ಅಧ್ಯಕ್ಷರಾದ ರಾಮಾಂಜಿನಪ್ಪ, ತಾದೂರು ಮಂಜುನಾಥ್, ರಮಣಾರೆಡ್ಡಿ, ದಪರ್ತಿ ಮುರುಳಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ರೈತ ಸಮುದಾಯದ ಮರಣ ಶಾಸನದಂತಿರುವ ಕರ್ನಾಟಕ ಕೃಷಿ ಉತ್ಪನ್ನಗಳ ಮಾರಾಟ (ನಿಯಂತ್ರಣ ಮತ್ತು ಅಭಿವೃದ್ಧಿ)(ಎರಡನೇ ತಿದ್ದುಪಡಿ) ಮಸೂದೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಬುಧವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.</p>.<p>ಈ ವೇಳೆ ಮಾತನಾಡಿದ ರೈತಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ’ರಾಜ್ಯ ಸರ್ಕಾರ ರೈತ ಸಮುದಾಯಕ್ಕೆ ಅನುಕೂಲವಾಗುವ ರೀತಿಯಲ್ಲಿ ಕೃಷಿ ಉತ್ಪನ್ನಗಳ ಮಾರಾಟ ಹಾಗೂ ಖರೀದಿಗೆ ಇದ್ದ ನಿರ್ಬಂಧ ಸಡಿಲಿಸಿ, ಈ ಕ್ಷೇತ್ರದಲ್ಲಿ ಬೃಹತ್ ಕಾರ್ಪೊರೇಟ್ ಕಂಪನಿಗಳಿಗೆ ಅವಕಾಶ ಮಾಡಿಕೊಡಲು ಮುಂದಾಗಿದೆ‘ ಎಂದು ಹೇಳಿದರು.</p>.<p>’ತತ್ಕ್ಷಣವೇ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಈ ಸಂಬಂಧ ಕೇಂದ್ರಕ್ಕೆ ಮಾಹಿತಿ ಸಲ್ಲಿಸಬೇಕು ಎಂದು ಕೇಂದ್ರ ಕೃಷಿ ಸಚಿವಾಲಯ ರಾಜ್ಯಕ್ಕೆ ಪತ್ರ ಬರೆದಿತ್ತು. ಅದರ ಬೆನ್ನಲ್ಲೇ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ತರಾತುರಿಯಲ್ಲಿ ಮಸೂದೆಯನ್ನು ಜಾರಿಗೆ ತರಲು ಹೊರಟಿದೆ‘ ಎಂದು ತಿಳಿಸಿದರು.</p>.<p>’ಈ ಮಸೂದೆ ಕುರಿತಂತೆ ಸರ್ಕಾರ ಸಚಿವ ಸಂಪುಟದಲ್ಲಿ ಚರ್ಚೆಯನ್ನೂ ನಡೆಸದೇ ರಾತ್ರೋರಾತ್ರಿ ಸುಗ್ರೀವಾಜ್ಞೆ ಸಿದ್ಧಪಡಿಸಿ ಅನುಮೋದನೆಗಾಗಿ ರಾಜಭವನಕ್ಕೆ ಕಳುಹಿಸಿದೆ. ರಾಜ್ಯಪಾಲರು ಮಸೂದೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು ಮಂಡಿಸಿ ಎಂದು ವಾಪಾಸ್ ಕಳುಹಿಸಿದ್ದಾರೆ‘ ಎಂದರು.</p>.<p>’ಈಗಿರುವ 1966ರ ಎಪಿಎಂಸಿ ಕಾಯ್ದೆಯು ರೈತರ ಹಿತವನ್ನೇ ಪ್ರಧಾನವಾಗಿ ಹೊಂದಿದೆ. 1986ರಲ್ಲಿ ಇದಕ್ಕೆ ತಿದ್ದುಪಡಿ ತಂದು ಕಾಯ್ದೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗಿತ್ತು. ಒಂದೊಮ್ಮೆ ತಿದ್ದುಪಡಿ ಮಸೂದೆ ಜಾರಿಗೆ ಬಂದರೆ ರೈತರ ಶೋಷಣೆ ಹೆಚ್ಚಲಿದೆ‘ ಎಂದು ಹೇಳಿದರು.</p>.<p>’ಗ್ರಾಹಕರಿಗೆ ಸಂಸ್ಕರಿತ, ಪ್ಯಾಕೇಟ್ ಆಹಾರ, ಆಹಾರ ಪದಾರ್ಥಗಳನ್ನು ಪೂರೈಸುವ ವಾಲ್ ಮಾರ್ಟ್, ಜಿಯೋ ಮಾರ್ಕೆಟಿಂಗ್, ಅಮೆಜಾನ್, ಫ್ಲಿಪ್ಕಾರ್ಟ್ನಂತಹ ಕಾರ್ಪೊರೇಟ್ ಕಂಪನಿಗಳು, ಬಹುರಾಷ್ಟ್ರೀಯ ಕಂಪನಿಗಳಿಗೆ ಲಾಭ ಮಾಡಿಕೊಡುವ ಹುನ್ನಾರವಿದು‘ ಎಂದು ಆರೋಪಿಸಿದರು.</p>.<p>’ದೊಡ್ಡ ಕಂಪೆನಿಗಳು ಈವರೆಗೆ ಎಪಿಎಂಸಿಯಲ್ಲಿ ಪರವಾನಗಿ ಪಡೆದ ವ್ಯಾಪಾರಿಗಳಿಂದ ಕೃಷಿ ಉತ್ಪನ್ನಗಳನ್ನು ಖರೀದಿಸಬಹುದಿತ್ತು. ತಮ್ಮದೇ ಪ್ರಾಂಗಣ (ಯಾರ್ಡ್) ಹೊಂದಿರುವ ಕಂಪನಿಗಳು ರೈತರಿಂದ ಖರೀದಿ ಮಾಡಬೇಕಾದರೆ ಕೃಷಿ ಮಾರುಕಟ್ಟೆ ನಿರ್ದೇಶನಾಲಯದ ಜತೆ ಒಪ್ಪಂದ ಮಾಡಿಕೊಳ್ಳುವುದು ಕಡ್ಡಾಯವಾಗಿತ್ತು‘ ಎಂದು ಹೇಳಿದರು.</p>.<p>’ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಎಪಿಎಂಸಿ ಪ್ರಾಂಗಣದಿಂದ ಹೊರಗೆ ಅಥವಾ ಒಡಂಬಡಿಕೆಯ ಪ್ರಾಂಗಣ ಹೊಂದಿದವರು ಮಾತ್ರ ಖರೀದಿ ಮಾಡಬಹುದು ಎಂಬ ಷರತ್ತನ್ನು ತೆಗೆದು ಹಾಕಿ ಬಂಡವಾಳಶಾಹಿಗಳಿಗೆ ಅನುಕೂಲ ಕಲ್ಪಿಸಲು ಸರ್ಕಾರಗಳು ಮುಂದಾಗಿವೆ‘ ಎಂದು ತಿಳಿಸಿದರು.</p>.<p>ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಪಿ.ರಾಮನಾಥ್, ತಾಲ್ಲೂಕು ಘಟಕಗಳ ಅಧ್ಯಕ್ಷರಾದ ರಾಮಾಂಜಿನಪ್ಪ, ತಾದೂರು ಮಂಜುನಾಥ್, ರಮಣಾರೆಡ್ಡಿ, ದಪರ್ತಿ ಮುರುಳಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>