ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಜನಸಾಮಾನ್ಯರ ಕೈಗೆ ಹೋಗಬೇಕು. ಅಭಿವೃದ್ಧಿ ಪ್ರತಿಫಲ ಜನರಿಗೆ ತಲುಪಬೇಕು ಎಂದು ಸ್ವಾತಂತ್ರ್ಯದ ಪರಿಕಲ್ಪನೆ ಅಡಿ ಕೆಲಸ ಮಾಡುತ್ತಿದ್ದೇವೆ. ಆದರೆ ಇತ್ತೀಚೆಗೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಸೇವಾ ಕ್ಷೇತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಖಾಸಗಿಯವರಿಗೆ ಮಾರಾಟ ಮಾಡುತ್ತಿದೆ’ ಎಂದರು.