<p><strong>ಚಿಂತಾಮಣಿ</strong>: ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶದಂತೆ ವಾರದ ಆರು ದಿನ ಮಕ್ಕಳಿಗೆ ಮೊಟ್ಟೆ ನೀಡಬೇಕು. ಮೊಟ್ಟೆ ಸೇವಿಸದೇ ಇರುವವರಿಗೆ ಮಾತ್ರ ಬಾಳೆಹಣ್ಣು ವಿತರಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ.</p>.<p>ಸರ್ಕಾರಿ ಆದೇಶ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಕೆಲವು ಶಾಲೆಗಳಲ್ಲಿ ಎಸ್ಡಿಎಂಸಿ ನಡವಳಿ ರೂಪಿಸಿಕೊಂಡು ತಮ್ಮಲ್ಲೇ ಬದಲಾವಣೆ ಮಾಡಿಕೊಂಡು 3 ದಿನ ಮೊಟ್ಟೆ 3 ದಿನ ಬಾಳೆಹಣ್ಣು ವಿತರಣೆ ಮಾಡುವುದು. ಇನ್ನೂ ಕೆಲವು ಶಾಲೆಗಳಲ್ಲಿ ಸೋಮವಾರ, ಶನಿವಾರ ಮೊಟ್ಟೆ ವಿತರಣೆ ಮಾಡದಿರುವುದು ಗಮನಕ್ಕೆ ಬಂದಿದೆ. ವಾರದ 6 ದಿನ ಮೊಟ್ಟೆ ನೀಡುವ ಕುರಿತು ತಾಲ್ಲೂಕಿನ ಎಲ್ಲಾ ಶಾಲೆಗಳ ಎಸ್ಡಿಎಂಸಿ ಸಭೆಕರೆದು ಮಾಹಿತಿ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಅಕ್ಷರದಾಸೋಹ ಸಹಾಯಕ ನಿರ್ದೇಶಕರಿಗೆ ಆದೇಶ ನೀಡಲಾಗಿದೆ.</p>.<p>ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು ತಮ್ಮ ವ್ಯಾಪ್ತಿಯ ಎಲ್ಲ ಶಾಲೆಗಳಿಗೂ ತಿಳಿಸಬೇಕು. ಎಲ್ಲಾ ಶಾಲೆಗಳ ಎಸ್ಡಿಎಂಸಿ ಸಭೆ ನಡೆಸಿ ಮಾಹಿತಿ ತಿಳಿಸಿರುವ ಕುರಿತು ವರದಿಯನ್ನು ಜಿಲ್ಲಾ ಶಿಕ್ಷಣಾಧಿಕಾರಿ ಅಕ್ಷರ ದಾಸೋಹ ವಿಭಾಗ ಜಿಲ್ಲಾ ಪಂಚಾಯಿತಿ, ಚಿಕ್ಕಬಳ್ಳಾಪುರ ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶದಂತೆ ವಾರದ ಆರು ದಿನ ಮಕ್ಕಳಿಗೆ ಮೊಟ್ಟೆ ನೀಡಬೇಕು. ಮೊಟ್ಟೆ ಸೇವಿಸದೇ ಇರುವವರಿಗೆ ಮಾತ್ರ ಬಾಳೆಹಣ್ಣು ವಿತರಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ.</p>.<p>ಸರ್ಕಾರಿ ಆದೇಶ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಕೆಲವು ಶಾಲೆಗಳಲ್ಲಿ ಎಸ್ಡಿಎಂಸಿ ನಡವಳಿ ರೂಪಿಸಿಕೊಂಡು ತಮ್ಮಲ್ಲೇ ಬದಲಾವಣೆ ಮಾಡಿಕೊಂಡು 3 ದಿನ ಮೊಟ್ಟೆ 3 ದಿನ ಬಾಳೆಹಣ್ಣು ವಿತರಣೆ ಮಾಡುವುದು. ಇನ್ನೂ ಕೆಲವು ಶಾಲೆಗಳಲ್ಲಿ ಸೋಮವಾರ, ಶನಿವಾರ ಮೊಟ್ಟೆ ವಿತರಣೆ ಮಾಡದಿರುವುದು ಗಮನಕ್ಕೆ ಬಂದಿದೆ. ವಾರದ 6 ದಿನ ಮೊಟ್ಟೆ ನೀಡುವ ಕುರಿತು ತಾಲ್ಲೂಕಿನ ಎಲ್ಲಾ ಶಾಲೆಗಳ ಎಸ್ಡಿಎಂಸಿ ಸಭೆಕರೆದು ಮಾಹಿತಿ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಅಕ್ಷರದಾಸೋಹ ಸಹಾಯಕ ನಿರ್ದೇಶಕರಿಗೆ ಆದೇಶ ನೀಡಲಾಗಿದೆ.</p>.<p>ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು ತಮ್ಮ ವ್ಯಾಪ್ತಿಯ ಎಲ್ಲ ಶಾಲೆಗಳಿಗೂ ತಿಳಿಸಬೇಕು. ಎಲ್ಲಾ ಶಾಲೆಗಳ ಎಸ್ಡಿಎಂಸಿ ಸಭೆ ನಡೆಸಿ ಮಾಹಿತಿ ತಿಳಿಸಿರುವ ಕುರಿತು ವರದಿಯನ್ನು ಜಿಲ್ಲಾ ಶಿಕ್ಷಣಾಧಿಕಾರಿ ಅಕ್ಷರ ದಾಸೋಹ ವಿಭಾಗ ಜಿಲ್ಲಾ ಪಂಚಾಯಿತಿ, ಚಿಕ್ಕಬಳ್ಳಾಪುರ ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>