ಗ್ರಾ.ಪಂ ಸದಸ್ಯ ಎಂ.ಆರ್.ಲಕ್ಷ್ಮಿನಾರಾಯಣ್ ಮಾತನಾಡಿ, ಗ್ರಾಮ ಪಂಚಾಯಿತಿಯಿಂದ ರಸಮಂಜರಿ ಕಾರ್ಯಕ್ರಮವನ್ನು ಕೆರೆ ಕೋಡಿಯಲ್ಲಿ ಆಯೋಜಿಸಲಾಗಿತ್ತು. ನಾಗರಿಕರಿಗೆ ಮನರಂಜನೆಯ ಜತೆಗೆ ನೈಸರ್ಗಿಕ ಸಂಪತ್ತಿನ ಬಗ್ಗೆ ತಿಳಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಈ ಕಾರ್ಯಕ್ರಮವನ್ನು ನಡೆಸದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಸಚಿವ ಡಾ.ಕೆ.ಸುಧಾಕರ್ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ. ಕಾರ್ಯಕ್ರಮಕ್ಕೆ ನಿರ್ಬಂಧ ಹೇರಿದ್ದಾರೆ ಎಂದು ದೂರಿದರು.