<p>ಗುಡಿಬಂಡೆ: ‘ಸಾಮಾನ್ಯ ಜನರು ಹಾಗೂ ರೈತರಿಗೆ ಸೌಲಭ್ಯಗಳನ್ನು ಕಲ್ಪಿಸಲು ವಿಫಲವಾದ ಕೇಂದ್ರ ಸರ್ಕಾರ ಈಗ ಇಂಧನ ಬೆಲೆ ಏರಿಕೆ ಮಾಡಿ ಜನರ ಮೇಲೆ ಬರೆಹಾಕಿದೆ’ ಎಂದು ಪ್ರಜಾ ಸಂಘರ್ಷ ಸಮಿತಿಯ ಮುಖ್ಯಸ್ಥ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಹೇಳಿದರು.</p>.<p>ಪೆಟ್ರೋಲ್, ಡೀಸೆಲ್ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರಜಾ ಸಂಘರ್ಷ ಸಮಿತಿ ಬುಧವಾರ ತಾಲ್ಲೂಕು ಕಚೇರಿ ಮುಂಭಾಗ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>ನರೇಂದ್ರ ಮೋದಿ ಅಧಿಕಾರಕ್ಕೆ ಬಂದು 7 ವರ್ಷದಲ್ಲಿ ಹಲವಾರು ಬಾರಿ ಇಂಧನ ಬೆಲೆ ಏರಿಕೆಯಿಂದ ಈಗ ₹100 ಕ್ಕೆ ಏರಿಕೆ ಕಂಡಿದೆ. ಇದರಿಂದ ಜನ ಸಾಮಾನ್ಯರ ಬಳಕೆ ಮಾಡುವ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ, ಜನಜೀವನಕ್ಕೆ ಅಸ್ತವ್ಯಸ್ತವಾಗಿದೆ ಎಂದರು.</p>.<p>ಮೋದಿ ಆಡಳಿತಾವಧಿಯಲ್ಲಿ ಒಂದು ಒಳ್ಳೆಯ ಕೆಲಸ ಮಾಡಿಲ್ಲ. ಬದಲಿಗೆ ಉಪಯುಕ್ತವಾಗದ ವಿಷಯವನ್ನು ತೆಗೆದುಕೊಂಡು ಜನಸಾಮಾನ್ಯರ ಸಮಸ್ಯೆಗಳನ್ನು ಮರೆಮಾಚುತ್ತಿದ್ದಾರೆ. ಈ ನಿಟ್ಟಿನಲ್ಲಿ ಪ್ರಜಾ ಸಂಘರ್ಷ ಸಮಿತಿ ಅಗತ್ಯ ವಸ್ತುಗಳ ಏರಿಕೆಯ ವಿರುದ್ಧ ಹೋರಾಟ ಶುರು ಮಾಡಿದ್ದು, ಇದು ಕೇವಲ ಆರಂಭ ಮಾತ್ರ. ಸಮಿತಿ<br />ಯಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆಯಿಂದಾಗುವ ದುಷ್ಪರಿಣಾಮಗಳ ಮನವರಿಕೆ ಮಾಡುತ್ತಾ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.</p>.<p>ಬೇಡಿಕೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.</p>.<p>ಪ್ರಜಾ ಸಂಘರ್ಷ ಸಮಿತಿಯ ಮುಖಂಡ ಶಿವಪ್ಪ, ರಾಜು, ರಾಮರೆಡ್ಡಿ, ವೆಂಕಟರೋಣ, ಮೌಲಾ, ಆನಂದಪ್ಪ, ರಮಣ, ಅಶ್ವತ್ಥಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಡಿಬಂಡೆ: ‘ಸಾಮಾನ್ಯ ಜನರು ಹಾಗೂ ರೈತರಿಗೆ ಸೌಲಭ್ಯಗಳನ್ನು ಕಲ್ಪಿಸಲು ವಿಫಲವಾದ ಕೇಂದ್ರ ಸರ್ಕಾರ ಈಗ ಇಂಧನ ಬೆಲೆ ಏರಿಕೆ ಮಾಡಿ ಜನರ ಮೇಲೆ ಬರೆಹಾಕಿದೆ’ ಎಂದು ಪ್ರಜಾ ಸಂಘರ್ಷ ಸಮಿತಿಯ ಮುಖ್ಯಸ್ಥ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಹೇಳಿದರು.</p>.<p>ಪೆಟ್ರೋಲ್, ಡೀಸೆಲ್ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರಜಾ ಸಂಘರ್ಷ ಸಮಿತಿ ಬುಧವಾರ ತಾಲ್ಲೂಕು ಕಚೇರಿ ಮುಂಭಾಗ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>ನರೇಂದ್ರ ಮೋದಿ ಅಧಿಕಾರಕ್ಕೆ ಬಂದು 7 ವರ್ಷದಲ್ಲಿ ಹಲವಾರು ಬಾರಿ ಇಂಧನ ಬೆಲೆ ಏರಿಕೆಯಿಂದ ಈಗ ₹100 ಕ್ಕೆ ಏರಿಕೆ ಕಂಡಿದೆ. ಇದರಿಂದ ಜನ ಸಾಮಾನ್ಯರ ಬಳಕೆ ಮಾಡುವ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ, ಜನಜೀವನಕ್ಕೆ ಅಸ್ತವ್ಯಸ್ತವಾಗಿದೆ ಎಂದರು.</p>.<p>ಮೋದಿ ಆಡಳಿತಾವಧಿಯಲ್ಲಿ ಒಂದು ಒಳ್ಳೆಯ ಕೆಲಸ ಮಾಡಿಲ್ಲ. ಬದಲಿಗೆ ಉಪಯುಕ್ತವಾಗದ ವಿಷಯವನ್ನು ತೆಗೆದುಕೊಂಡು ಜನಸಾಮಾನ್ಯರ ಸಮಸ್ಯೆಗಳನ್ನು ಮರೆಮಾಚುತ್ತಿದ್ದಾರೆ. ಈ ನಿಟ್ಟಿನಲ್ಲಿ ಪ್ರಜಾ ಸಂಘರ್ಷ ಸಮಿತಿ ಅಗತ್ಯ ವಸ್ತುಗಳ ಏರಿಕೆಯ ವಿರುದ್ಧ ಹೋರಾಟ ಶುರು ಮಾಡಿದ್ದು, ಇದು ಕೇವಲ ಆರಂಭ ಮಾತ್ರ. ಸಮಿತಿ<br />ಯಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆಯಿಂದಾಗುವ ದುಷ್ಪರಿಣಾಮಗಳ ಮನವರಿಕೆ ಮಾಡುತ್ತಾ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.</p>.<p>ಬೇಡಿಕೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.</p>.<p>ಪ್ರಜಾ ಸಂಘರ್ಷ ಸಮಿತಿಯ ಮುಖಂಡ ಶಿವಪ್ಪ, ರಾಜು, ರಾಮರೆಡ್ಡಿ, ವೆಂಕಟರೋಣ, ಮೌಲಾ, ಆನಂದಪ್ಪ, ರಮಣ, ಅಶ್ವತ್ಥಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>