ಮಂಜಿನ ಆರ್ಭಟ ವಾಹನ ಸವಾರರಿಗೆ ಸವಾಲಾಗಿ ಪರಿಣಮಿಸಿದೆ. ಬೆಳಿಗ್ಗೆ 8ಗಂಟೆಯಾದರೂ ಮಂಜು ಸುರಿಯುತ್ತಲೇ ಇರುತ್ತದೆ. ಇದರಿಂದ ಪಾರಾಗಲು ವಾಹನ ಸವಾರರು ಲೈಟ್ಗಳನ್ನು ಹಾಕಿಕೊಂಡು ಸಂಚರಿಸುವುದು ಅನಿವಾರ್ಯವಾಗಿದೆ. ವಾಹನಗಳು ತೀರಾ ಸಮೀಪಕ್ಕೆ ಬರುವ ತನಕವೂ ಕಾಣಿಸುವುದಿಲ್ಲ. ಹಾಗಾಗಿ, ಅಪಘಾತಗಳಾಗುವ ಆತಂಕವೂ ಸವಾರರಿಗೆ ಕಾಡುತ್ತಿದೆ.