<p><strong>ಚಿಕ್ಕಬಳ್ಳಾಪುರ</strong>: ತಾಲ್ಲೂಕಿನ ಕಳವಾರ ಗ್ರಾಮದ ಬಳಿಯ ಪಾಪಾಗ್ನಿ ಮಠದಲ್ಲಿ ಸೋಮವಾರ ಕರ್ನಾಟಕ ಪುಲಿಕೇಶಿ ಸಂಘದಿಂದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ನಡೆಯಿತು. 13 ಜೋಡಿಗಳು ನವಜೀವನಕ್ಕೆ ಕಾಲಿಟ್ಟವು.</p>.<p>ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಮಾತನಾಡಿ, ‘ಸಾಮೂಹಿಕ ವಿವಾಹಗಳು ಆರ್ಥಿಕ ಹೊರೆಯನ್ನು ತಗ್ಗಿಸುತ್ತವೆ. ಸರಳ ವಿವಾಹಗಳು ಹೆಚ್ಚು ನಡೆಯಬೇಕು. ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವುದರಿಂದ ಜಾತಿಯ ಪಿಡುಗು ನಿವಾರಣೆ ಆಗುತ್ತದೆ’ ಎಂದು ಹೇಳಿದರು.</p>.<p>ಕಾಲಜ್ಞಾನಿ ವೀರಬ್ರಹ್ಮಯ್ಯ ಅವರ ಈ ತಪೋಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ನಡೆಯುತ್ತಿದೆ. ದಾಂಪತ್ಯಕ್ಕೆ ಕಾಲಿಟ್ಟ ಜೋಡಿಗಳಿಗೆ ಶುಭವಾಗಲಿ ಎಂದು ಹಾರೈಸಿದರು.</p>.<p>ಸಂಸದ ಡಾ.ಕೆ. ಸುಧಾಕರ್ ಮಾತನಾಡಿ, ‘ನವಜೀವನಕ್ಕೆ ಕಾಲಿಟ್ಟ ದಂಪತಿ ಸುಖ ಮತ್ತು ಸಂತೋಷದಿಂದ ಬದುಕಲಿ. ಇಲ್ಲಿ ಅಂತರ್ಜಾತಿ ವಿವಾಹಗಳು ಇಲ್ಲಿ ನಡೆದಿವೆ. ಜಾತಿಯೇ ನಮ್ಮ ಮೊದಲ ಶತ್ರು. ಈ ವಿಚಾರಗಳನ್ನು ನಾವು ಮಾತಿನಲ್ಲಿ ಮಾತ್ರ ಹೇಳುತ್ತೇವೆ. ಆದರೆ ಇಲ್ಲಿ ಈ ವಿಚಾರ ಜಾರಿಯಾಗಿದೆ’ ಎಂದರು.</p>.<p>ಜಾತಿ ಎನ್ನುವುದು ಸಾಮಾಜಿಕ ಪಿಡುಗು. ಆದ್ದರಿಂದ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ಅಗತ್ಯ. ಇಂತಹ ಸಾಮೂಹಿಕ ಅಂತರ್ಜಾತಿ ವಿವಾಹಗಳು ನಡೆಯುವುದು ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.</p>.<p>ಅಧ್ಯಕ್ಷತೆವಹಿಸಿದ್ದ ಕರ್ನಾಟಕ ಪುಲಿಕೇಶಿ ಸಂಘದ ಅಧ್ಯಕ್ಷ ಜಿ.ಚಂದ್ರಶೇಖರ್ ಮಾತನಾಡಿ, ಸಂಘವು ಹಲವು ಸಾಮಾಜಿಕ ಕೆಲಸಗಳನ್ನು ನಡೆಸುತ್ತಿದೆ. ಸಾಮೂಹಿಕ ಮತ್ತು ಅಂತರ್ಜಾತಿ ವಿವಾಹಗಳ ಸಮಾಜದಲ್ಲಿ ಹೆಚ್ಚಬೇಕು ಎಂದರು.</p>.<p> ಡಾ.ಪ್ರೀತಿ ಸುಧಾಕರ್, ಜಿಲ್ಲಾಧಿಕಾರಿ ಪಿ.ರವೀಂದ್ರ, ನಟ ಅಭಿಮನ್ಯು ಕಾಶೀನಾಥ್ ನವಜೋಡಿಗಳಿಗೆ ಶುಭಕೋರಿದರು.</p>.<p>ಬಿಜೆಪಿ ಮುಖಂಡ ಕೆ.ವಿ. ನಾಗರಾಜ್, ನಗರಸಭೆ ಮಾಜಿ ಅಧ್ಯಕ್ಷ ಎ.ಗಜೇಂದ್ರ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯಾಚಾರಿ, ಮಾಜಿ ಸದಸ್ಯರಾದ ಮಂಜುನಾಥಾಚಾರಿ, ಸತೀಶ್, ಪಾಪಾಗ್ನಿ ಮಠದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ತಾಲ್ಲೂಕಿನ ಕಳವಾರ ಗ್ರಾಮದ ಬಳಿಯ ಪಾಪಾಗ್ನಿ ಮಠದಲ್ಲಿ ಸೋಮವಾರ ಕರ್ನಾಟಕ ಪುಲಿಕೇಶಿ ಸಂಘದಿಂದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ನಡೆಯಿತು. 13 ಜೋಡಿಗಳು ನವಜೀವನಕ್ಕೆ ಕಾಲಿಟ್ಟವು.</p>.<p>ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಮಾತನಾಡಿ, ‘ಸಾಮೂಹಿಕ ವಿವಾಹಗಳು ಆರ್ಥಿಕ ಹೊರೆಯನ್ನು ತಗ್ಗಿಸುತ್ತವೆ. ಸರಳ ವಿವಾಹಗಳು ಹೆಚ್ಚು ನಡೆಯಬೇಕು. ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವುದರಿಂದ ಜಾತಿಯ ಪಿಡುಗು ನಿವಾರಣೆ ಆಗುತ್ತದೆ’ ಎಂದು ಹೇಳಿದರು.</p>.<p>ಕಾಲಜ್ಞಾನಿ ವೀರಬ್ರಹ್ಮಯ್ಯ ಅವರ ಈ ತಪೋಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ನಡೆಯುತ್ತಿದೆ. ದಾಂಪತ್ಯಕ್ಕೆ ಕಾಲಿಟ್ಟ ಜೋಡಿಗಳಿಗೆ ಶುಭವಾಗಲಿ ಎಂದು ಹಾರೈಸಿದರು.</p>.<p>ಸಂಸದ ಡಾ.ಕೆ. ಸುಧಾಕರ್ ಮಾತನಾಡಿ, ‘ನವಜೀವನಕ್ಕೆ ಕಾಲಿಟ್ಟ ದಂಪತಿ ಸುಖ ಮತ್ತು ಸಂತೋಷದಿಂದ ಬದುಕಲಿ. ಇಲ್ಲಿ ಅಂತರ್ಜಾತಿ ವಿವಾಹಗಳು ಇಲ್ಲಿ ನಡೆದಿವೆ. ಜಾತಿಯೇ ನಮ್ಮ ಮೊದಲ ಶತ್ರು. ಈ ವಿಚಾರಗಳನ್ನು ನಾವು ಮಾತಿನಲ್ಲಿ ಮಾತ್ರ ಹೇಳುತ್ತೇವೆ. ಆದರೆ ಇಲ್ಲಿ ಈ ವಿಚಾರ ಜಾರಿಯಾಗಿದೆ’ ಎಂದರು.</p>.<p>ಜಾತಿ ಎನ್ನುವುದು ಸಾಮಾಜಿಕ ಪಿಡುಗು. ಆದ್ದರಿಂದ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ಅಗತ್ಯ. ಇಂತಹ ಸಾಮೂಹಿಕ ಅಂತರ್ಜಾತಿ ವಿವಾಹಗಳು ನಡೆಯುವುದು ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.</p>.<p>ಅಧ್ಯಕ್ಷತೆವಹಿಸಿದ್ದ ಕರ್ನಾಟಕ ಪುಲಿಕೇಶಿ ಸಂಘದ ಅಧ್ಯಕ್ಷ ಜಿ.ಚಂದ್ರಶೇಖರ್ ಮಾತನಾಡಿ, ಸಂಘವು ಹಲವು ಸಾಮಾಜಿಕ ಕೆಲಸಗಳನ್ನು ನಡೆಸುತ್ತಿದೆ. ಸಾಮೂಹಿಕ ಮತ್ತು ಅಂತರ್ಜಾತಿ ವಿವಾಹಗಳ ಸಮಾಜದಲ್ಲಿ ಹೆಚ್ಚಬೇಕು ಎಂದರು.</p>.<p> ಡಾ.ಪ್ರೀತಿ ಸುಧಾಕರ್, ಜಿಲ್ಲಾಧಿಕಾರಿ ಪಿ.ರವೀಂದ್ರ, ನಟ ಅಭಿಮನ್ಯು ಕಾಶೀನಾಥ್ ನವಜೋಡಿಗಳಿಗೆ ಶುಭಕೋರಿದರು.</p>.<p>ಬಿಜೆಪಿ ಮುಖಂಡ ಕೆ.ವಿ. ನಾಗರಾಜ್, ನಗರಸಭೆ ಮಾಜಿ ಅಧ್ಯಕ್ಷ ಎ.ಗಜೇಂದ್ರ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯಾಚಾರಿ, ಮಾಜಿ ಸದಸ್ಯರಾದ ಮಂಜುನಾಥಾಚಾರಿ, ಸತೀಶ್, ಪಾಪಾಗ್ನಿ ಮಠದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>