<p><strong>ಚಿಂತಾಮಣಿ</strong>: ಬಂಗಾರಪೇಟೆ–ಯಶವಂತಪುರ ಪ್ಯಾಸೆಂಜರ್ ರೈಲನ್ನು ಈ ಮೊದಲು ಇದ್ದಂತೆ ಮೆಜೆಸ್ಟಿಕ್ ಮೂಲಕ ಚನ್ನಪಟ್ಟಣದವರೆಗೂ ಮುಂದುವರೆಸಬೇಕು ಎಂದು ರೈಲು ಪ್ರಯಾಣಿಕರು ಸಂಸದರು ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.</p>.<p>ಈಪ್ಯಾಸೆಂಜರ್ ರೈಲು 9 ತಿಂಗಳ ನಂತರ ಪುನರಾರಂಭವಾಗಿದ್ದು, ಸೋಮವಾರ ನಗರದ ನಿಲ್ದಾಣಕ್ಕೆ ರೈಲು ಬಂದಾಗ ಪ್ರಯಾಣಿಕರು ಸ್ಟೇಷನ್ ಮಾಸ್ಟರ್ ಮೂಲಕ ಮನವಿ ಸಲ್ಲಿಸಿದರು. ಬಂಗಾರಪೇಟೆ, ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಪ್ರದೇಶಗಳ ಜನರಿಗೆ ಈ ರೈಲಿನ ಸಂಚಾರ ತುಂಬಾ ಅನುಕೂಲಕರವಾಗಿದೆ. ಬಡವರು ಹಾಗೂ ದಿನನಿತ್ಯ ಕೆಲಸಗಳಿಗೆ ಹೋಗುವ ಪ್ರಯಾಣಿಕರು ಕಡಿಮೆ ದರದಲ್ಲಿ ಪ್ರಯಾಣಿಸಬಹುದು. ಜತೆಗೆ ಈ ಭಾಗದ ರೈತರು ತಮ್ಮ ತರಕಾರಿ ಬೆಳೆಗಳ ಉತ್ಪನ್ನಗಳನ್ನು ಸಾಗಿಸಲು ಅನುಕೂಲವಾಗುತ್ತದೆ. ಹೀಗಾಗಿ ಇನ್ನೂ ಹೆಚ್ಚಿನ ರೈಲುಗಳನ್ನು ಓಡಿಸಬೇಕು ಹಾಗೂ ಮೆಜೆಸ್ಟಿಕ್ ಗೆ ಸಂಪರ್ಕ ಕಲ್ಪಿಸಬೇಕು ಎಂದು ಪ್ರಯಾಣಿಕರು ಮನವಿ ಮಾಡಿದರು.</p>.<p>ಈ ರೈಲು ಮೊದಲು ಯಶವಂತಪುರದಿಂದ ಮೆಜೆಸ್ಟಿಕ್ ಮಾರ್ಗವಾಗಿ ಚನ್ನಪಟ್ಟಣದವರೆಗೂ ಸಂಚರಿಸುತ್ತಿತ್ತು. ಮೆಜೆಸ್ಟಿಕ್ ತಲುಪುವ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಿತ್ತು. ಈ ರೈಲನ್ನು ಯಶವಂತಪುರಕ್ಕೆ ಸ್ಥಗಿತಗೊಳಿಸಿರುವುದು ಬೆಂಗಳೂರು ಕೇಂದ್ರ ನಿಲ್ದಾಣವನ್ನು ಸೇರಿ, ಅಲ್ಲಿಂದ ಬೇರೆ ಬೇರೆ ಕಡೆ ಹೋಗುವ ಪ್ರಯಾಣಿಕರಿಗೆ ತೊಂದರೆಯಾಗಿದೆ. ರೈಲ್ವೆ ಅಧಿಕಾರಿಗಳು ಹಾಗೂ ಸಂಸದರು ಕೂಡಲೇ ಗಮನಹರಿಸಿ ರೈಲು ಹಿಂದಿನಂತೆ ಸಂಚರಿಸಲು ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಬಂಗಾರಪೇಟೆ–ಯಶವಂತಪುರ ಪ್ಯಾಸೆಂಜರ್ ರೈಲನ್ನು ಈ ಮೊದಲು ಇದ್ದಂತೆ ಮೆಜೆಸ್ಟಿಕ್ ಮೂಲಕ ಚನ್ನಪಟ್ಟಣದವರೆಗೂ ಮುಂದುವರೆಸಬೇಕು ಎಂದು ರೈಲು ಪ್ರಯಾಣಿಕರು ಸಂಸದರು ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.</p>.<p>ಈಪ್ಯಾಸೆಂಜರ್ ರೈಲು 9 ತಿಂಗಳ ನಂತರ ಪುನರಾರಂಭವಾಗಿದ್ದು, ಸೋಮವಾರ ನಗರದ ನಿಲ್ದಾಣಕ್ಕೆ ರೈಲು ಬಂದಾಗ ಪ್ರಯಾಣಿಕರು ಸ್ಟೇಷನ್ ಮಾಸ್ಟರ್ ಮೂಲಕ ಮನವಿ ಸಲ್ಲಿಸಿದರು. ಬಂಗಾರಪೇಟೆ, ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಪ್ರದೇಶಗಳ ಜನರಿಗೆ ಈ ರೈಲಿನ ಸಂಚಾರ ತುಂಬಾ ಅನುಕೂಲಕರವಾಗಿದೆ. ಬಡವರು ಹಾಗೂ ದಿನನಿತ್ಯ ಕೆಲಸಗಳಿಗೆ ಹೋಗುವ ಪ್ರಯಾಣಿಕರು ಕಡಿಮೆ ದರದಲ್ಲಿ ಪ್ರಯಾಣಿಸಬಹುದು. ಜತೆಗೆ ಈ ಭಾಗದ ರೈತರು ತಮ್ಮ ತರಕಾರಿ ಬೆಳೆಗಳ ಉತ್ಪನ್ನಗಳನ್ನು ಸಾಗಿಸಲು ಅನುಕೂಲವಾಗುತ್ತದೆ. ಹೀಗಾಗಿ ಇನ್ನೂ ಹೆಚ್ಚಿನ ರೈಲುಗಳನ್ನು ಓಡಿಸಬೇಕು ಹಾಗೂ ಮೆಜೆಸ್ಟಿಕ್ ಗೆ ಸಂಪರ್ಕ ಕಲ್ಪಿಸಬೇಕು ಎಂದು ಪ್ರಯಾಣಿಕರು ಮನವಿ ಮಾಡಿದರು.</p>.<p>ಈ ರೈಲು ಮೊದಲು ಯಶವಂತಪುರದಿಂದ ಮೆಜೆಸ್ಟಿಕ್ ಮಾರ್ಗವಾಗಿ ಚನ್ನಪಟ್ಟಣದವರೆಗೂ ಸಂಚರಿಸುತ್ತಿತ್ತು. ಮೆಜೆಸ್ಟಿಕ್ ತಲುಪುವ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಿತ್ತು. ಈ ರೈಲನ್ನು ಯಶವಂತಪುರಕ್ಕೆ ಸ್ಥಗಿತಗೊಳಿಸಿರುವುದು ಬೆಂಗಳೂರು ಕೇಂದ್ರ ನಿಲ್ದಾಣವನ್ನು ಸೇರಿ, ಅಲ್ಲಿಂದ ಬೇರೆ ಬೇರೆ ಕಡೆ ಹೋಗುವ ಪ್ರಯಾಣಿಕರಿಗೆ ತೊಂದರೆಯಾಗಿದೆ. ರೈಲ್ವೆ ಅಧಿಕಾರಿಗಳು ಹಾಗೂ ಸಂಸದರು ಕೂಡಲೇ ಗಮನಹರಿಸಿ ರೈಲು ಹಿಂದಿನಂತೆ ಸಂಚರಿಸಲು ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>