ಕಾರ್ಮಿಕರು ತಮಗೆ ತಿಳಿದಿರುವ ಬಿಜೆಪಿ ಮುಖಂಡರ ಮನೆ ಬಾಗಿಲು ಬಡಿಯತೊಡಗಿದ್ದಾರೆ. ಇದು ಬಿಜೆಪಿ ಮುಖಂಡರಿಗೆ ಇರಿಸು ಮುರುಸಿಗೆ ಕಾರಣವಾಗಿದೆ. ಜತೆಗೆ ಮೋದಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆದೊಯ್ಯುವ ವ್ಯವಸ್ಥೆಯ ಹೊಣೆ ಹೊತ್ತಿದ್ದವರ ನಡುವೆ ಆರೋಪ ಪ್ರತ್ಯಾರೋಪಕ್ಕೂ ಕಾರಣವಾಗಿದೆ. ಕೊನೆಗೂ ತಲಾ ₹ 200 ನೀಡಲಾಗಿದೆ ಎಂದು ತಿಳಿದುಬಂದಿದೆ.