<p><strong>ಸಾದಲಿ:</strong> ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿಪಲಿಚೇರ್ಲು ಗ್ರಾಮ ಪಂಚಾಯಿತಿಯ ಮುಮ್ಮನಹಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.</p>.<p>ಮುಮ್ಮನಹಳ್ಳಿಯ ವಾಟರ್ಮೆನ್ ವೆಂಕಟೇಶ್ ಅವರಿಗೆ 16 ತಿಂಗಳಿನಿಂದಲೂ ಸಂಬಳ ಬಾಕಿ ಇದೆ. ಹಾಗಾಗಿ ಅವರ ನೀರು ಬಿಡುವುದನ್ನು ನಿಲ್ಲಿಸಿದ್ದಾರೆ. ಹಾಗಾಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದರು.</p>.<p>ನೀರು ಬಿಡುವಂತೆ ಗ್ರಾಮಸ್ಥರು ಕೇಳಿದ್ದು ‘ಸಂಬಳ ಕೊಡಿಸಿ ಅದುವರೆಗೆ ನೀರು ಬಿಡುವುದಿಲ್ಲ’ ಎಂದಿದ್ದಾರೆ ಎಂದು ಗ್ರಾಮಸ್ಥರು ಹೇಳಿದರು.</p>.<p>ಪಂಚಾಯಿತಿ ಅಧ್ಯಕ್ಷ ಗೋಪಿನಾಥ್ ಹಾಗೂ ಪಿಡಿಒ ಕಾತ್ಯಾಯಿನಿ ಪ್ರತಿಕ್ರಿಯಿಸಿ, ಜಲಗಂಟಿಗೆ ವೇತನ ನೀಡಲಾಗುವುದು. ಸಮರ್ಪಕವಾಗಿ ನೀರು ಪೂರೈಸಲಾಗುವುದು ಎಂದು ಭರವಸೆ ನೀಡಿದರು.</p>.<p>ನರಸಪ್ಪ, ಸುಬ್ಬಾರೆಡ್ಡಿ, ನರಸರೆಡ್ಡಿ, ಗಂಗಪ್ಪ, ವೆಂಕಟೇಶ್ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾದಲಿ:</strong> ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿಪಲಿಚೇರ್ಲು ಗ್ರಾಮ ಪಂಚಾಯಿತಿಯ ಮುಮ್ಮನಹಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.</p>.<p>ಮುಮ್ಮನಹಳ್ಳಿಯ ವಾಟರ್ಮೆನ್ ವೆಂಕಟೇಶ್ ಅವರಿಗೆ 16 ತಿಂಗಳಿನಿಂದಲೂ ಸಂಬಳ ಬಾಕಿ ಇದೆ. ಹಾಗಾಗಿ ಅವರ ನೀರು ಬಿಡುವುದನ್ನು ನಿಲ್ಲಿಸಿದ್ದಾರೆ. ಹಾಗಾಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದರು.</p>.<p>ನೀರು ಬಿಡುವಂತೆ ಗ್ರಾಮಸ್ಥರು ಕೇಳಿದ್ದು ‘ಸಂಬಳ ಕೊಡಿಸಿ ಅದುವರೆಗೆ ನೀರು ಬಿಡುವುದಿಲ್ಲ’ ಎಂದಿದ್ದಾರೆ ಎಂದು ಗ್ರಾಮಸ್ಥರು ಹೇಳಿದರು.</p>.<p>ಪಂಚಾಯಿತಿ ಅಧ್ಯಕ್ಷ ಗೋಪಿನಾಥ್ ಹಾಗೂ ಪಿಡಿಒ ಕಾತ್ಯಾಯಿನಿ ಪ್ರತಿಕ್ರಿಯಿಸಿ, ಜಲಗಂಟಿಗೆ ವೇತನ ನೀಡಲಾಗುವುದು. ಸಮರ್ಪಕವಾಗಿ ನೀರು ಪೂರೈಸಲಾಗುವುದು ಎಂದು ಭರವಸೆ ನೀಡಿದರು.</p>.<p>ನರಸಪ್ಪ, ಸುಬ್ಬಾರೆಡ್ಡಿ, ನರಸರೆಡ್ಡಿ, ಗಂಗಪ್ಪ, ವೆಂಕಟೇಶ್ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>