‘ಪ್ರಥಮ ಹಂತವಾಗಿ ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ಪ್ಲಾಸ್ಟಿಕ್ ಕೈಚೀಲ ಕೊಂಡೊಯ್ಯುತ್ತಿದ್ದವರಿಗೆ ದಂಡ ವಿಧಿಸಲಾಗಿದೆ. ಸಾರ್ವಜನಿಕರು ಇನ್ನು ಮುಂದೆ ಯಾವುದೇ ರೀತಿಯಾ ಪ್ಲಾಸ್ಟಿಕ್ ಲೋಟ, ಚಮಚ, ತಟ್ಟೆ ಇವುಗಳನ್ನು ಬಳಕೆ ಮಾಡಬಾರದು. ಬಳಕೆ ಮಾಡಿದವರಿಗೆ ತಲಾ ₹200 ದಂಡ ವಿಧಿಸಲಾಗುವುದು. ಸಾರ್ವಜನಿಕರು ಕೂಡ ಎಲ್ಲಿಯಾದರೂ ಪ್ಲಾಸ್ಟಿಕ್ ಬಳಕೆ ಮಾಡುವುದು ಗಮನಕ್ಕೆ ಬಂದರೆ ನಗರಸಭೆ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದು ತಿಳಿಸಿದರು. ನಗರಸಭೆ ಆಯುಕ್ತ ಉಮಾಕಾಂತ್ ಈ ವೇಳೆ ಹಾಜರಿದ್ದರು.