ಸಭೆಯ ಬಳಿಕ ಅಭ್ಯರ್ಥಿಗಳ ಆಯ್ಕೆ, ಚುನಾವಣೆ ತಂತ್ರಗಾರಿಕೆ ಕುರಿತಂತೆ ಆಯ್ದ ಮುಖಂಡರು ರಹಸ್ಯ ಸಭೆ ನಡೆಸಿ ಚರ್ಚೆ ನಡೆಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್.ಕೇಶವರೆಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ಕೆ.ವಿ.ನಾಗರಾಜ್, ಮರುಳಕುಂಟೆ ಕೃಷ್ಣಮೂರ್ತಿ, ಗರಿಗರೆಡ್ಡಿ, ರವೀಂದ್ರ ರೆಡ್ಡಿ, ಮೋಹನ್, ಚಂದ್ರಶೇಖರ್, ಕೃಷ್ಣಾರೆಡ್ಡಿ, ವೆಂಕಟನಾರಾಯಣಪ್ಪ ಸಭೆಯಲ್ಲಿ ಹಾಜರಿದ್ದರು.