<p><strong>ಚಿಕ್ಕಬಳ್ಳಾಪುರ</strong>: ನಗರದ ಪೊಲೀಸ್ ಸಮುದಾಯ ಭವನದಲ್ಲಿ ಕಳೆದ 15 ದಿನಗಳಿಂದ ನಡೆದ ಬೇಸಿಗೆ ಶಿಬಿರಕ್ಕೆ ಶುಕ್ರವಾರ ತೆರೆ ಬಿದ್ದಿತು. 120ಕ್ಕೂ ಹೆಚ್ಚು ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. </p>.<p>ಪೊಲೀಸ್ ಕುಟುಂಬದ ಮಕ್ಕಳ ಜೊತೆಗೆ ನಾಗರಿಕರ ಮಕ್ಕಳೂ ಸಹ ಶಿಬಿರದಲ್ಲಿ ಪಾಲ್ಗೊಂಡಿದ್ದರು. ನೃತ್ಯ, ಸಂಗೀತ, ಸಮರ ಕಲೆಗಳು, ಅಬಕಾಸ್, ರಸಪ್ರಶ್ನೆ ಸ್ಪರ್ಧೆ, ನೆನಪಿನ ಶಕ್ತಿಗೆ ಸಂಬಂಧಿಸಿದ ಸ್ಪರ್ಧೆಗಳು, ಯೋಗ, ಪಥಸಂಚಲನ ಹೀಗೆ ವಿವಿಧ ವಿಚಾರಗಳ ಬಗ್ಗೆ ಪೊಲೀಸರು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು.</p>.<p>ಡಿಎಆರ್ ಪೊಲೀಸರು ವಿವಿಧ ವಿಚಾರಗಳು ಕುರಿತು ಮಕ್ಕಳಿಗೆ ಅಣಕು ಪ್ರದರ್ಶನಗಳ ಮೂಲಕ ವಿಚಾರಗಳ ಬಗ್ಗೆ ಅರಿವು ಮೂಡಿಸಿದರು.</p>.<p>ಸಮಾರೋಪದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಮಕ್ಕಳ ಜೊತೆ ಬೆರೆತು ನಲಿದರು. ಸಮಾರೋಪ ಕಾರ್ಯಕ್ರಮದಲ್ಲಿ ಶಿಬಿರದಲ್ಲಿ ಪಾಲ್ಗೊಂಡಿದ್ದ ಮಕ್ಕಳು ನಡೆಸಿಕೊಟ್ಟ ನೃತ್ಯಗಳು ಗಮನ ಸೆಳೆದವು.</p>.<p>ಕುಶಾಲ್ ಚೌಕ್ಸೆ ಮಾತನಾಡಿ, ಬೇಸಿಗೆ ಶಿಬಿರವು ಮಕ್ಕಳ ಮನೋವಿಕಾಸಕ್ಕೆ ಕಾರಣವಾಗಿದೆ. ಇಂತಹ ಶಿಬಿರಗಳಿಂದ ಮಕ್ಕಳ ವ್ಯಕ್ತಿತ್ವ ಬೆಳೆಯುತ್ತದೆ. ಮಹಿಳಾ ಠಾಣೆ, ಸಿಇಎನ್ ಠಾಣೆ, ನಗರ ಠಾಣೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಶಿಬಿರಕ್ಕೆ ಶ್ರಮಿಸಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ನಗರದ ಪೊಲೀಸ್ ಸಮುದಾಯ ಭವನದಲ್ಲಿ ಕಳೆದ 15 ದಿನಗಳಿಂದ ನಡೆದ ಬೇಸಿಗೆ ಶಿಬಿರಕ್ಕೆ ಶುಕ್ರವಾರ ತೆರೆ ಬಿದ್ದಿತು. 120ಕ್ಕೂ ಹೆಚ್ಚು ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. </p>.<p>ಪೊಲೀಸ್ ಕುಟುಂಬದ ಮಕ್ಕಳ ಜೊತೆಗೆ ನಾಗರಿಕರ ಮಕ್ಕಳೂ ಸಹ ಶಿಬಿರದಲ್ಲಿ ಪಾಲ್ಗೊಂಡಿದ್ದರು. ನೃತ್ಯ, ಸಂಗೀತ, ಸಮರ ಕಲೆಗಳು, ಅಬಕಾಸ್, ರಸಪ್ರಶ್ನೆ ಸ್ಪರ್ಧೆ, ನೆನಪಿನ ಶಕ್ತಿಗೆ ಸಂಬಂಧಿಸಿದ ಸ್ಪರ್ಧೆಗಳು, ಯೋಗ, ಪಥಸಂಚಲನ ಹೀಗೆ ವಿವಿಧ ವಿಚಾರಗಳ ಬಗ್ಗೆ ಪೊಲೀಸರು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು.</p>.<p>ಡಿಎಆರ್ ಪೊಲೀಸರು ವಿವಿಧ ವಿಚಾರಗಳು ಕುರಿತು ಮಕ್ಕಳಿಗೆ ಅಣಕು ಪ್ರದರ್ಶನಗಳ ಮೂಲಕ ವಿಚಾರಗಳ ಬಗ್ಗೆ ಅರಿವು ಮೂಡಿಸಿದರು.</p>.<p>ಸಮಾರೋಪದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಮಕ್ಕಳ ಜೊತೆ ಬೆರೆತು ನಲಿದರು. ಸಮಾರೋಪ ಕಾರ್ಯಕ್ರಮದಲ್ಲಿ ಶಿಬಿರದಲ್ಲಿ ಪಾಲ್ಗೊಂಡಿದ್ದ ಮಕ್ಕಳು ನಡೆಸಿಕೊಟ್ಟ ನೃತ್ಯಗಳು ಗಮನ ಸೆಳೆದವು.</p>.<p>ಕುಶಾಲ್ ಚೌಕ್ಸೆ ಮಾತನಾಡಿ, ಬೇಸಿಗೆ ಶಿಬಿರವು ಮಕ್ಕಳ ಮನೋವಿಕಾಸಕ್ಕೆ ಕಾರಣವಾಗಿದೆ. ಇಂತಹ ಶಿಬಿರಗಳಿಂದ ಮಕ್ಕಳ ವ್ಯಕ್ತಿತ್ವ ಬೆಳೆಯುತ್ತದೆ. ಮಹಿಳಾ ಠಾಣೆ, ಸಿಇಎನ್ ಠಾಣೆ, ನಗರ ಠಾಣೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಶಿಬಿರಕ್ಕೆ ಶ್ರಮಿಸಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>