ಚಿಂತಾಮಣಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕಕ್ಕೆ ಡಿ. 6ರಂದು ಚುನಾವಣೆ ನಡೆಸಲು ಆದೇಶವಾಗಿದ್ದು ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿತ್ತು. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದರು.
ರಾಜ್ಯ ಚುನಾವಣಾಧಿಕಾರಿಯಿಂದ ಶನಿವಾರ ಬಂದ ಆದೇಶದಂತೆ ಚುನಾವಣಾ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೂ ಮುಂದೂಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಜಿ. ಸುರೇಶ್ ತಿಳಿಸಿದ್ದಾರೆ.
ಚುನಾವಣೆ ಮುಂದೂಡಿಕೆಗೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ ಎಂದು ಶಿಕ್ಷಕರು ತಿಳಿಸಿದ್ದಾರೆ.