<p><strong>ಗೌರಿಬಿದನೂರು: </strong>‘ಗ್ರಾಮೀಣ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಬಡತನ ಹಾಗೂ ಆರ್ಥಿಕ ಸ್ಥಿತಿಗತಿ ಎಂದಿಗೂ ಸಮಸ್ಯೆಯಾಗಲಾಗುವುದಿಲ್ಲ ಎಂಬುದಕ್ಕೆ 4 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಯ ಸಾಧನೆ ಮಾದರಿಯಾಗಿದೆ’ ಎಂದು ಕೆಎಎಸ್ ಅಧಿಕಾರಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ಎನ್. ವರಪ್ರಸಾದರೆಡ್ಡಿ ತಿಳಿಸಿದರು.</p>.<p>ತಾಲ್ಲೂಕಿನ ನಂದಿಗಾನಹಳ್ಳಿಯಲ್ಲಿ ಕೃಷಿ ವಿಶ್ವವಿದ್ಯಾಲಯದಿಂದ 4 ಚಿನ್ನದ ಪದಕ ಪಡೆದ ಎನ್.ವಿ. ಶ್ವೇತಾ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು.</p>.<p>ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಬಹುತೇಕ ಮಂದಿ ಗ್ರಾಮೀಣ ಭಾಗದಿಂದ ಬಂದಂತಹ ವಿದ್ಯಾರ್ಥಿಗಳೇ ಆಗಿದ್ದಾರೆ ಎಂದರು.</p>.<p>ಬಡತನ, ಆರ್ಥಿಕ ಸಂಕಷ್ಟ ಹಾಗೂ ಇನ್ನಿತರ ಯಾವುದೇ ಸಮಸ್ಯೆಗಳಿಗೆ ಹೆದರದೆ ಕೆಚ್ಚೆದೆಯಿಂದ ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿದ್ದಾರೆ. ಅದಕ್ಕೆ ಪೂರಕವಾಗಿ ಛಲದಿಂದ ಬದುಕು ಸಾಗಿಸಿ ಕೃಷಿ ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ ಹಾಗೂ ಪಿಎಚ್.ಡಿ ಪದವಿ ಪಡೆದು ಅವರ ವಿಶಿಷ್ಟ ಸಾಧನೆಗೆ 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಆ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾದ ಶ್ವೇತಾ ಅವರ ಬದುಕು ಮಾದರಿಯಾಗಿದೆ. ಅವರ ಸಾಧನೆ ಜನ್ಮ ನೀಡಿದ ಪೋಷಕರು ಹಾಗೂ ವಿದ್ಯಾಭ್ಯಾಸಕ್ಕೆ ನೆರವಾದ ಹಿತೈಷಿಗಳಿಗೆ ಸಾರ್ಥಕತೆ ನೀಡಿದೆ ಎಂದು ಹೇಳಿದರು.</p>.<p>ಗ್ರಾಮೀಣ ವಿದ್ಯಾರ್ಥಿಗಳು ಸೌಲಭ್ಯ ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಲಯನ್ಸ್ ಸಂಸ್ಥೆಯ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಜೆ. ಶ್ರೇಣಿಕ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪ್ರೋತ್ಸಾಹಿಸಿದಲ್ಲಿ ಮುಂದೆ ಅವರ ಮಾರ್ಗದರ್ಶನದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿದ್ದಾರೆ. ಅವರ ಆದರ್ಶ ಜೀವನ ಇತರರಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.</p>.<p>ಮುಖಂಡರಾದ ಜಿ.ಎನ್. ಸೂರಜ್, ವೇಣುಗೋಪಾಲ್, ಸಂಕೇತ್ ಶ್ರೀರಾಮ್, ಜಿ.ಕೆ. ಪ್ರಸಾದ್, ಕೆ.ಆರ್. ಸಪ್ತಗಿರಿ, ಮಂಜುನಾಥ್, ಅನಿಲ್, ಉದಯಕುಮಾರ್, ರವಿ, ಕೋದಂಡಪ್ಪ, ಶಿವಾರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು: </strong>‘ಗ್ರಾಮೀಣ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಬಡತನ ಹಾಗೂ ಆರ್ಥಿಕ ಸ್ಥಿತಿಗತಿ ಎಂದಿಗೂ ಸಮಸ್ಯೆಯಾಗಲಾಗುವುದಿಲ್ಲ ಎಂಬುದಕ್ಕೆ 4 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಯ ಸಾಧನೆ ಮಾದರಿಯಾಗಿದೆ’ ಎಂದು ಕೆಎಎಸ್ ಅಧಿಕಾರಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ಎನ್. ವರಪ್ರಸಾದರೆಡ್ಡಿ ತಿಳಿಸಿದರು.</p>.<p>ತಾಲ್ಲೂಕಿನ ನಂದಿಗಾನಹಳ್ಳಿಯಲ್ಲಿ ಕೃಷಿ ವಿಶ್ವವಿದ್ಯಾಲಯದಿಂದ 4 ಚಿನ್ನದ ಪದಕ ಪಡೆದ ಎನ್.ವಿ. ಶ್ವೇತಾ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು.</p>.<p>ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಬಹುತೇಕ ಮಂದಿ ಗ್ರಾಮೀಣ ಭಾಗದಿಂದ ಬಂದಂತಹ ವಿದ್ಯಾರ್ಥಿಗಳೇ ಆಗಿದ್ದಾರೆ ಎಂದರು.</p>.<p>ಬಡತನ, ಆರ್ಥಿಕ ಸಂಕಷ್ಟ ಹಾಗೂ ಇನ್ನಿತರ ಯಾವುದೇ ಸಮಸ್ಯೆಗಳಿಗೆ ಹೆದರದೆ ಕೆಚ್ಚೆದೆಯಿಂದ ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿದ್ದಾರೆ. ಅದಕ್ಕೆ ಪೂರಕವಾಗಿ ಛಲದಿಂದ ಬದುಕು ಸಾಗಿಸಿ ಕೃಷಿ ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ ಹಾಗೂ ಪಿಎಚ್.ಡಿ ಪದವಿ ಪಡೆದು ಅವರ ವಿಶಿಷ್ಟ ಸಾಧನೆಗೆ 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಆ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾದ ಶ್ವೇತಾ ಅವರ ಬದುಕು ಮಾದರಿಯಾಗಿದೆ. ಅವರ ಸಾಧನೆ ಜನ್ಮ ನೀಡಿದ ಪೋಷಕರು ಹಾಗೂ ವಿದ್ಯಾಭ್ಯಾಸಕ್ಕೆ ನೆರವಾದ ಹಿತೈಷಿಗಳಿಗೆ ಸಾರ್ಥಕತೆ ನೀಡಿದೆ ಎಂದು ಹೇಳಿದರು.</p>.<p>ಗ್ರಾಮೀಣ ವಿದ್ಯಾರ್ಥಿಗಳು ಸೌಲಭ್ಯ ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಲಯನ್ಸ್ ಸಂಸ್ಥೆಯ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಜೆ. ಶ್ರೇಣಿಕ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪ್ರೋತ್ಸಾಹಿಸಿದಲ್ಲಿ ಮುಂದೆ ಅವರ ಮಾರ್ಗದರ್ಶನದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿದ್ದಾರೆ. ಅವರ ಆದರ್ಶ ಜೀವನ ಇತರರಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.</p>.<p>ಮುಖಂಡರಾದ ಜಿ.ಎನ್. ಸೂರಜ್, ವೇಣುಗೋಪಾಲ್, ಸಂಕೇತ್ ಶ್ರೀರಾಮ್, ಜಿ.ಕೆ. ಪ್ರಸಾದ್, ಕೆ.ಆರ್. ಸಪ್ತಗಿರಿ, ಮಂಜುನಾಥ್, ಅನಿಲ್, ಉದಯಕುಮಾರ್, ರವಿ, ಕೋದಂಡಪ್ಪ, ಶಿವಾರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>