<p><strong>ಚಿಂತಾಮಣಿ:</strong> ನಗರದ ಆಶ್ರಯ ಬಡಾವಣೆಯಲ್ಲಿ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಿರುವ ವಸತಿಗೃಹಗಳಿಗೆ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ. ನಗರವನ್ನೆಲ್ಲ ಸ್ವಚ್ಛಗೊಳಿಸುವ ಪೌರಕಾರ್ಮಿಕರು ಬೆಳಕಿಲ್ಲದೆ ಕಗ್ಗತ್ತಲಲ್ಲಿ ಕಾಲಕಳೆಯುವಂತಾಗಿದೆ.</p>.<p>ಗೃಹಭಾಗ್ಯ ಯೋಜನೆಯಡಿ ಪೌರಕಾರ್ಮಿಕರಿಗಾಗಿ 32 ಮನೆ ನಿರ್ಮಾಣ ಮಾಡಲಾಗಿದೆ. ತಲಾ ₹7.5 ಲಕ್ಷ ವೆಚ್ಚದಲ್ಲಿ ಸುಮಾರು ₹2.4 ಕೋಟಿ ಖರ್ಚು ಮಾಡಿ ಮನೆ ನಿರ್ಮಾಣ ಮಾಡಲಾಗಿದೆ. ಕಟ್ಟಡದ ಕಾಮಗಾರಿ ಪೂರ್ಣವಾಗದಿದ್ದರೂ 2022ನೇ ಮೇ ತಿಂಗಳಲ್ಲಿ ಅಂದಿನ ನಗರಾಭಿವೃದ್ಧಿ ಸಚಿವ ಎಂಟಿಬಿ ನಾಗರಾಜ್ ಉದ್ಘಾಟನೆ ನೆರವೇರಿಸಿದ್ದರು.</p>.<p>ವಸತಿಗೃಹಗಳಿಗೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಬೀದಿ ದೀಪ ಮುಂತಾದ ಸೌಲಭ್ಯ ಒದಗಿಸದೆ ಉದ್ಘಾಟನೆ ನೆರವೇರಿಸಿ ಪೌರಕಾರ್ಮಿಕರಿಗೆ ವಿತರಿಸಲಾಗಿತ್ತು. ಪೌರಕಾರ್ಮಿಕರು ಅಂದಿನಿಂದಲೂ ತಾತ್ಕಾಲಿಕವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡು ಉಪಯೋಗಿಸುತ್ತಿದ್ದರು.</p>.<p>ಬೆಸ್ಕಾಂ ಅಧಿಕಾರಿಗಳು ಹಲವಾರು ಬಾರಿ ನಗರಸಭೆಯ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಬೆಸ್ಕಾಂ ಸಿಬ್ಬಂದಿ ಎಲ್ಲ ಮನೆಗಳ ಅಕ್ರಮ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ.</p>.<p>ಪ್ರತಿದಿನ ಬೆಳಗಾದ ಕೂಡಲೇ ನಗರದ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡು ಜನರ ಆರೋಗ್ಯವನ್ನು ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಕನಿಷ್ಠ ಸೌಲಭ್ಯ ಒದಗಿಸದಿರುವುದು ಸರಿಯಲ್ಲ. ಅಗತ್ಯ ಸೌಲಭ್ಯ ಒದಗಿಸದಿರುವುದು ಪೌರಕಾರ್ಮಿಕರಿಗೆ ನೀಡಿರುವ ಕತ್ತಲಿನ ಭಾಗ್ಯವಾಗಿದೆ ಎಂದು ಪೌರಕಾರ್ಮಿಕರೊಬ್ಬರ ಪತ್ನಿ ವೀಣಾ ಅಸಮಧಾನ ವ್ಯಕ್ತಪಡಿಸಿದರು.</p>.<p>ವಿದ್ಯುತ್ ಕಡಿತದ ಕುರಿತು ಮಾಹಿತಿ ಇಲ್ಲ. ಕಡತಗಳ ಪರಿಶೀಲಿಸಿ ಏನು ಸಮಸ್ಯೆ ಆಗಿದೆ ಎಂದು ಖಚಿತಪಡಿಸಿ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳಲಾಗುವುದು ಎಂದು ಪೌರಾಯುಕ್ತ ಜಿ.ಎನ್.ಚಲಪತಿ ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ನಗರದ ಆಶ್ರಯ ಬಡಾವಣೆಯಲ್ಲಿ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಿರುವ ವಸತಿಗೃಹಗಳಿಗೆ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ. ನಗರವನ್ನೆಲ್ಲ ಸ್ವಚ್ಛಗೊಳಿಸುವ ಪೌರಕಾರ್ಮಿಕರು ಬೆಳಕಿಲ್ಲದೆ ಕಗ್ಗತ್ತಲಲ್ಲಿ ಕಾಲಕಳೆಯುವಂತಾಗಿದೆ.</p>.<p>ಗೃಹಭಾಗ್ಯ ಯೋಜನೆಯಡಿ ಪೌರಕಾರ್ಮಿಕರಿಗಾಗಿ 32 ಮನೆ ನಿರ್ಮಾಣ ಮಾಡಲಾಗಿದೆ. ತಲಾ ₹7.5 ಲಕ್ಷ ವೆಚ್ಚದಲ್ಲಿ ಸುಮಾರು ₹2.4 ಕೋಟಿ ಖರ್ಚು ಮಾಡಿ ಮನೆ ನಿರ್ಮಾಣ ಮಾಡಲಾಗಿದೆ. ಕಟ್ಟಡದ ಕಾಮಗಾರಿ ಪೂರ್ಣವಾಗದಿದ್ದರೂ 2022ನೇ ಮೇ ತಿಂಗಳಲ್ಲಿ ಅಂದಿನ ನಗರಾಭಿವೃದ್ಧಿ ಸಚಿವ ಎಂಟಿಬಿ ನಾಗರಾಜ್ ಉದ್ಘಾಟನೆ ನೆರವೇರಿಸಿದ್ದರು.</p>.<p>ವಸತಿಗೃಹಗಳಿಗೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಬೀದಿ ದೀಪ ಮುಂತಾದ ಸೌಲಭ್ಯ ಒದಗಿಸದೆ ಉದ್ಘಾಟನೆ ನೆರವೇರಿಸಿ ಪೌರಕಾರ್ಮಿಕರಿಗೆ ವಿತರಿಸಲಾಗಿತ್ತು. ಪೌರಕಾರ್ಮಿಕರು ಅಂದಿನಿಂದಲೂ ತಾತ್ಕಾಲಿಕವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡು ಉಪಯೋಗಿಸುತ್ತಿದ್ದರು.</p>.<p>ಬೆಸ್ಕಾಂ ಅಧಿಕಾರಿಗಳು ಹಲವಾರು ಬಾರಿ ನಗರಸಭೆಯ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಬೆಸ್ಕಾಂ ಸಿಬ್ಬಂದಿ ಎಲ್ಲ ಮನೆಗಳ ಅಕ್ರಮ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ.</p>.<p>ಪ್ರತಿದಿನ ಬೆಳಗಾದ ಕೂಡಲೇ ನಗರದ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡು ಜನರ ಆರೋಗ್ಯವನ್ನು ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಕನಿಷ್ಠ ಸೌಲಭ್ಯ ಒದಗಿಸದಿರುವುದು ಸರಿಯಲ್ಲ. ಅಗತ್ಯ ಸೌಲಭ್ಯ ಒದಗಿಸದಿರುವುದು ಪೌರಕಾರ್ಮಿಕರಿಗೆ ನೀಡಿರುವ ಕತ್ತಲಿನ ಭಾಗ್ಯವಾಗಿದೆ ಎಂದು ಪೌರಕಾರ್ಮಿಕರೊಬ್ಬರ ಪತ್ನಿ ವೀಣಾ ಅಸಮಧಾನ ವ್ಯಕ್ತಪಡಿಸಿದರು.</p>.<p>ವಿದ್ಯುತ್ ಕಡಿತದ ಕುರಿತು ಮಾಹಿತಿ ಇಲ್ಲ. ಕಡತಗಳ ಪರಿಶೀಲಿಸಿ ಏನು ಸಮಸ್ಯೆ ಆಗಿದೆ ಎಂದು ಖಚಿತಪಡಿಸಿ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳಲಾಗುವುದು ಎಂದು ಪೌರಾಯುಕ್ತ ಜಿ.ಎನ್.ಚಲಪತಿ ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>