ಚುನಾವಣಾ ನೀತಿಸಂಹಿತೆ ಜಾರಿಯಾದ ಬಳಿಕವೂ ಸರ್ಕಾರಿ ಕಟ್ಟಡ ಬಳಸಿದ್ದ ಆರೋಪ ಸಚಿವರ ಮೇಲಿದೆ. ಸಚಿವರ ಕಚೇರಿ ಇದ್ದ ಕಟ್ಟಡದಲ್ಲಿ ಸಿಬ್ಬಂದಿ ಅನಧಿಕೃತವಾಗಿ ಕಾರ್ಯನಿರ್ವಹಿಸಿದ್ದಾರೆ. ಹೊರಗಿನಿಂದ ಕಚೇರಿಯ ಬಾಗಿಲು ಬಂದ್ ಮಾಡಿ ಒಳಗೆ ಕೆಲಸ ಮಾಡುತ್ತಿದ್ದರು ಎಂಬ ಆರೋಪವಿದೆ. ಈ ಬಗ್ಗೆ ಸ್ಪಷ್ಟನೆ ಕೇಳಿ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ರೋಹಿಣಿ ಸಿಂಧೂರಿ ನೋಟೀಸ್ ನೀಡಿದ್ದರು.