<p><strong>ಚಿಂತಾಮಣಿ: </strong>ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಭಾನುವಾರ ನಗರಸಭೆಯ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ.</p>.<p>ಚುನಾವಣೆ ಕುರಿತು ಚುನಾವಣಾ ಅಧಿಕಾರಿಯೂ ಆದ ಉಪವಿಭಾಗಾಧಿಕಾರಿ ರಘುನಂದನ್ ಸದಸ್ಯರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.</p>.<p>ಶಾಂತಿ ಸುವ್ಯವಸ್ಥೆ ಕಾಪಾಡಲು ನವೆಂಬರ್ 1 ರಂದು ಭಾನುವಾರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಗರಸಭೆ ಕಚೇರಿಯಿಂದ ಸುತ್ತಲೂ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ ಸೆಕ್ಷನ್ 144 ಜಾರಿಗೊಳಿಸಿ ದಂಡಾಧಿಕಾರಿ ಡಿ.ಹನುಮಂತರಾಯಪ್ಪ ಆದೇಶ ಹೊರಡಿಸಿದ್ದಾರೆ.</p>.<p>ಕುತೂಹಲದ ಸಮಬಲ: ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್ ಬಣ ಮತ್ತುಜೆಡಿಎಸ್ ಸಮಬಲದ ಸದಸ್ಯರನ್ನು ಹೊಂದಿರುವುದರಿಂದ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.</p>.<p>ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಹಿಂದುಳಿದ ವರ್ಗ (ಬ) ಮಹಿಳೆಗೆ ಮೀಸಲಾಗಿಡಲಾಗಿದೆ.</p>.<p>ನಗರದ 31 ನೇ ವಾರ್ಡ್ ತಿಮ್ಮಸಂದ್ರದಿಂದ ಆಯ್ಕೆಯಾಗಿರುವ ಜೆಡಿಎಸ್ ಅಭ್ಯರ್ಥಿ ಟಿ.ವಿ.ಮಂಜುಳ ಹಾಗೂ 27 ನೇ ವಾರ್ಡ್ ಶಾಂತಿನಗರದಿಂದ ಆಯ್ಕೆಯಾಗಿರುವ ಡಾ.ಎಂ.ಸಿ.ಸುಧಾಕರ್ ಬಣದ ಕೆ.ರಾಣಿಯಮ್ಮ ಅಧ್ಯಕ್ಷ ಪದವಿಯ ಆಕಾಂಕ್ಷಿಗಳು.</p>.<p>ಜೆಡಿಎಸ್ನಿಂದ ಆಯ್ಕೆಯಾಗಿರುವ ಮಹ್ಮದ್ ಶಫೀಕ್ ನಡೆ ನಿಗೂಢವಾಗಿದೆ. ಶಾಸಕರು ಹಾಗೂ ಜೆಡಿಎಸ್ ಮುಖಂಡರ ವಿರುದ್ಧ ಮುನಿಸಿಕೊಂಡಿರುವ ಶಫೀಕ್ ತಮ್ಮ ನಿರ್ಧಾರವನ್ನು ಬಹಿರಂಗಗೊಳಿಸಿಲ್ಲ. ಶಾಸಕರು ಹಾಗೂ ಪಕ್ಷದ ಸ್ಥಳೀಯ ಮುಖಂಡರ ವಿರುದ್ಧ ಟೀಕೆ ಮಾಡುತ್ತಿದ್ದ ಶಫೀಕ್ ಕಳೆದ 2-3 ದಿನಗಳಿಂದ ಯಾರ ಕೈಗೂ ಸಿಗುತ್ತಿಲ್ಲ, ಮೊಬೈಲ್ ಸ್ವಿಚ್ ಆಫ್ ಆಗಿದೆ. ಇವರ ಮತ ನಿರ್ಣಾಯಕವಾಗುತ್ತದೆ.</p>.<p><strong>ಜೆಡಿಎಸ್ ಜತೆ ಪಕ್ಷೇತರರು:</strong></p>.<p>ಪಕ್ಷೇತರಾಗಿ ಆಯ್ಕೆಯಾಗಿರುವ ಇಬ್ಬರಲ್ಲಿ ಒಬ್ಬರು ಜೆಡಿಎಸ್ ಜತೆ ಗುರುತಿಸಿಕೊಂಡಿದ್ದಾರೆ. ಮತ್ತೊಬ್ಬ ಯುವ ಸದಸ್ಯ, ಎಂಜನಿಯರಿಂಗ್ ಪದವೀಧರ ಅಕ್ಷಯಕುಮಾರ್ ಅವರು ಸಹ ತಮ್ಮ ನಿರ್ಧಾರ ಬಹಿರಂಗಗೊಳಿಸಿಲ್ಲ. ಇವರು ಸಹ ಕಳೆದ 2-3 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.</p>.<p><strong>ಬೆಂಬಲಿಗರಿಗೆ ರಕ್ಷಣೆ:</strong></p>.<p>ಕಾಂಗ್ರೆಸ್ ಪಕ್ಷದ ಏಕೈಕ ಸದಸ್ಯ ಜೆಡಿಎಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಎರಡು ಬಣಗಳು ತಮ್ಮ ಬೆಂಬಲಿಗರನ್ನು ಕೂಡಿಟ್ಟು ಜೋಪಾವಾಗಿ ಕಾಯ್ದುಕೊಂಡಿದ್ದಾರೆ. ಸದಸ್ಯರನ್ನು ನಾಳೆ ಚುನಾವಣೆ ಸಮಯಕ್ಕೆ ನೇರವಾಗಿ ನಗರಸಭೆಗೆ ಕರೆ ತರಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಭಾನುವಾರ ನಗರಸಭೆಯ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ.</p>.<p>ಚುನಾವಣೆ ಕುರಿತು ಚುನಾವಣಾ ಅಧಿಕಾರಿಯೂ ಆದ ಉಪವಿಭಾಗಾಧಿಕಾರಿ ರಘುನಂದನ್ ಸದಸ್ಯರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.</p>.<p>ಶಾಂತಿ ಸುವ್ಯವಸ್ಥೆ ಕಾಪಾಡಲು ನವೆಂಬರ್ 1 ರಂದು ಭಾನುವಾರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಗರಸಭೆ ಕಚೇರಿಯಿಂದ ಸುತ್ತಲೂ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ ಸೆಕ್ಷನ್ 144 ಜಾರಿಗೊಳಿಸಿ ದಂಡಾಧಿಕಾರಿ ಡಿ.ಹನುಮಂತರಾಯಪ್ಪ ಆದೇಶ ಹೊರಡಿಸಿದ್ದಾರೆ.</p>.<p>ಕುತೂಹಲದ ಸಮಬಲ: ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್ ಬಣ ಮತ್ತುಜೆಡಿಎಸ್ ಸಮಬಲದ ಸದಸ್ಯರನ್ನು ಹೊಂದಿರುವುದರಿಂದ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.</p>.<p>ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಹಿಂದುಳಿದ ವರ್ಗ (ಬ) ಮಹಿಳೆಗೆ ಮೀಸಲಾಗಿಡಲಾಗಿದೆ.</p>.<p>ನಗರದ 31 ನೇ ವಾರ್ಡ್ ತಿಮ್ಮಸಂದ್ರದಿಂದ ಆಯ್ಕೆಯಾಗಿರುವ ಜೆಡಿಎಸ್ ಅಭ್ಯರ್ಥಿ ಟಿ.ವಿ.ಮಂಜುಳ ಹಾಗೂ 27 ನೇ ವಾರ್ಡ್ ಶಾಂತಿನಗರದಿಂದ ಆಯ್ಕೆಯಾಗಿರುವ ಡಾ.ಎಂ.ಸಿ.ಸುಧಾಕರ್ ಬಣದ ಕೆ.ರಾಣಿಯಮ್ಮ ಅಧ್ಯಕ್ಷ ಪದವಿಯ ಆಕಾಂಕ್ಷಿಗಳು.</p>.<p>ಜೆಡಿಎಸ್ನಿಂದ ಆಯ್ಕೆಯಾಗಿರುವ ಮಹ್ಮದ್ ಶಫೀಕ್ ನಡೆ ನಿಗೂಢವಾಗಿದೆ. ಶಾಸಕರು ಹಾಗೂ ಜೆಡಿಎಸ್ ಮುಖಂಡರ ವಿರುದ್ಧ ಮುನಿಸಿಕೊಂಡಿರುವ ಶಫೀಕ್ ತಮ್ಮ ನಿರ್ಧಾರವನ್ನು ಬಹಿರಂಗಗೊಳಿಸಿಲ್ಲ. ಶಾಸಕರು ಹಾಗೂ ಪಕ್ಷದ ಸ್ಥಳೀಯ ಮುಖಂಡರ ವಿರುದ್ಧ ಟೀಕೆ ಮಾಡುತ್ತಿದ್ದ ಶಫೀಕ್ ಕಳೆದ 2-3 ದಿನಗಳಿಂದ ಯಾರ ಕೈಗೂ ಸಿಗುತ್ತಿಲ್ಲ, ಮೊಬೈಲ್ ಸ್ವಿಚ್ ಆಫ್ ಆಗಿದೆ. ಇವರ ಮತ ನಿರ್ಣಾಯಕವಾಗುತ್ತದೆ.</p>.<p><strong>ಜೆಡಿಎಸ್ ಜತೆ ಪಕ್ಷೇತರರು:</strong></p>.<p>ಪಕ್ಷೇತರಾಗಿ ಆಯ್ಕೆಯಾಗಿರುವ ಇಬ್ಬರಲ್ಲಿ ಒಬ್ಬರು ಜೆಡಿಎಸ್ ಜತೆ ಗುರುತಿಸಿಕೊಂಡಿದ್ದಾರೆ. ಮತ್ತೊಬ್ಬ ಯುವ ಸದಸ್ಯ, ಎಂಜನಿಯರಿಂಗ್ ಪದವೀಧರ ಅಕ್ಷಯಕುಮಾರ್ ಅವರು ಸಹ ತಮ್ಮ ನಿರ್ಧಾರ ಬಹಿರಂಗಗೊಳಿಸಿಲ್ಲ. ಇವರು ಸಹ ಕಳೆದ 2-3 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.</p>.<p><strong>ಬೆಂಬಲಿಗರಿಗೆ ರಕ್ಷಣೆ:</strong></p>.<p>ಕಾಂಗ್ರೆಸ್ ಪಕ್ಷದ ಏಕೈಕ ಸದಸ್ಯ ಜೆಡಿಎಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಎರಡು ಬಣಗಳು ತಮ್ಮ ಬೆಂಬಲಿಗರನ್ನು ಕೂಡಿಟ್ಟು ಜೋಪಾವಾಗಿ ಕಾಯ್ದುಕೊಂಡಿದ್ದಾರೆ. ಸದಸ್ಯರನ್ನು ನಾಳೆ ಚುನಾವಣೆ ಸಮಯಕ್ಕೆ ನೇರವಾಗಿ ನಗರಸಭೆಗೆ ಕರೆ ತರಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>