<p><strong>ಚಿಕ್ಕಬಳ್ಳಾಪುರ: </strong>ರೈತ ಉತ್ಪಾದಕ ಸಂಘಗಳ (ಪಿಎಫ್ಒ) ರಚನೆ ಸಂಬಂಧ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಗುರುವಾರ ಸಭೆನಡೆಯಿತು.</p>.<p>ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ನವೀನ್ ಮಾತನಾಡಿ, ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳು ತಮ್ಮ ಹೋಬಳಿ ಮಟ್ಟದಲ್ಲಿ ರೈತರಿಗೆ ಸಭೆಗಳನ್ನು ನಡೆಸಬೇಕು. ಎಫ್ಪಿಒ ರಚನೆ ಮತ್ತು ಅವುಗಳ ಕೆಲಸಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.</p>.<p>ರೈತರನ್ನು ಒಗ್ಗೂಡಿಸಿ ರೈತ ಉತ್ಪಾದಕ ಸಂಸ್ಥೆಗಳನ್ನು ರಚಿಸಬೇಕು. ಬೀಜದಿಂದ ಮಾರುಕಟ್ಟೆಯವರೆಗೂ ರೈತರೇ ತಮ್ಮ ಬೆಳೆಗಳಿಗೆ ದರ ನಿಗದಿಗೊಳಿಸಬೇಕು. ಉತ್ಪನ್ನಗಳನ್ನು ರೈತರೇ ಮಾರಾಟ ಮಾಡಿದಾಗ ಮಾತ್ರ ಹೆಚ್ಚು ಲಾಭ ಪಡೆಯಲು ಸಾಧ್ಯ ಎಂದು ತಿಳಿಸಿದರು.</p>.<p>ಈ ಎಲ್ಲ ದೃಷ್ಟಿಯಿಂದ ನೋಡಿದಾಗ ಪಿಎಫ್ಒಗಳು ರೈತರ ಆದಾಯವನ್ನು ಹೆಚ್ಚಿಸುತ್ತವೆ. ಈ ದಿಕ್ಕಿನಲ್ಲಿ ರೈತ ಮೋರ್ಚಾ ಪದಾಧಿಕಾರಿಗಳು ಕೃಷಿಕರಿಗೆ ತಿಳಿವಳಿಕೆ ಮೂಡಿಸಬೇಕು ಎಂದು ಸಲಹೆ ನೀಡಿದರು.</p>.<p>ಪಕ್ಷದ ಮುಖಂಡರು ತಮ್ಮ ಮಂಡಲ ವ್ಯಾಪ್ತಿಯಲ್ಲಿ ಯಾವ ಬೆಳೆಯನ್ನು ರೈತರು ಹೆಚ್ಚು ಬೆಳೆಯುವರು, ಅದರ ಬೆಲೆ, ಅನಿಶ್ಚಿತತೆ ಇತ್ಯಾದಿ ಬಗ್ಗೆ ಗಮನವಹಿಸಬೇಕು ಎಂದರು.</p>.<p>ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಸಿ.ವಿ. ಲೋಕೇಶ್ ಗೌಡ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಜಿ.ವಿ. ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಹಾಗೂ ಜಿಲ್ಲೆಯ ಎಲ್ಲ ಮಂಡಲದ ರೈತ ಮೋರ್ಚಾ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ರೈತ ಉತ್ಪಾದಕ ಸಂಘಗಳ (ಪಿಎಫ್ಒ) ರಚನೆ ಸಂಬಂಧ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಗುರುವಾರ ಸಭೆನಡೆಯಿತು.</p>.<p>ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ನವೀನ್ ಮಾತನಾಡಿ, ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳು ತಮ್ಮ ಹೋಬಳಿ ಮಟ್ಟದಲ್ಲಿ ರೈತರಿಗೆ ಸಭೆಗಳನ್ನು ನಡೆಸಬೇಕು. ಎಫ್ಪಿಒ ರಚನೆ ಮತ್ತು ಅವುಗಳ ಕೆಲಸಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.</p>.<p>ರೈತರನ್ನು ಒಗ್ಗೂಡಿಸಿ ರೈತ ಉತ್ಪಾದಕ ಸಂಸ್ಥೆಗಳನ್ನು ರಚಿಸಬೇಕು. ಬೀಜದಿಂದ ಮಾರುಕಟ್ಟೆಯವರೆಗೂ ರೈತರೇ ತಮ್ಮ ಬೆಳೆಗಳಿಗೆ ದರ ನಿಗದಿಗೊಳಿಸಬೇಕು. ಉತ್ಪನ್ನಗಳನ್ನು ರೈತರೇ ಮಾರಾಟ ಮಾಡಿದಾಗ ಮಾತ್ರ ಹೆಚ್ಚು ಲಾಭ ಪಡೆಯಲು ಸಾಧ್ಯ ಎಂದು ತಿಳಿಸಿದರು.</p>.<p>ಈ ಎಲ್ಲ ದೃಷ್ಟಿಯಿಂದ ನೋಡಿದಾಗ ಪಿಎಫ್ಒಗಳು ರೈತರ ಆದಾಯವನ್ನು ಹೆಚ್ಚಿಸುತ್ತವೆ. ಈ ದಿಕ್ಕಿನಲ್ಲಿ ರೈತ ಮೋರ್ಚಾ ಪದಾಧಿಕಾರಿಗಳು ಕೃಷಿಕರಿಗೆ ತಿಳಿವಳಿಕೆ ಮೂಡಿಸಬೇಕು ಎಂದು ಸಲಹೆ ನೀಡಿದರು.</p>.<p>ಪಕ್ಷದ ಮುಖಂಡರು ತಮ್ಮ ಮಂಡಲ ವ್ಯಾಪ್ತಿಯಲ್ಲಿ ಯಾವ ಬೆಳೆಯನ್ನು ರೈತರು ಹೆಚ್ಚು ಬೆಳೆಯುವರು, ಅದರ ಬೆಲೆ, ಅನಿಶ್ಚಿತತೆ ಇತ್ಯಾದಿ ಬಗ್ಗೆ ಗಮನವಹಿಸಬೇಕು ಎಂದರು.</p>.<p>ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಸಿ.ವಿ. ಲೋಕೇಶ್ ಗೌಡ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಜಿ.ವಿ. ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಹಾಗೂ ಜಿಲ್ಲೆಯ ಎಲ್ಲ ಮಂಡಲದ ರೈತ ಮೋರ್ಚಾ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>