ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿದ ಅವರು, ‘ಚಿಕ್ಕಬಳ್ಳಾಪುರದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೃಷಿ ಇಲಾಖೆಯವರು ಜಂಗಾಲಪಲ್ಲಿಯಲ್ಲಿ ಜ.14ರಂದು ಸಂಕ್ರಾಂತಿ ಹಬ್ಬದಂದು ಸುಗ್ಗಿ-ಹುಗ್ಗಿ ಕಾರ್ಯಕ್ರಮ ಮಾಡಿದ್ದಾರೆ. ಆದರೆ ಸ್ಥಳೀಯವಾಗಿ ಯಾರ ಮುಖಂಡರ ಹಾಗೂ ಜನರನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಎಲ್ಲರನ್ನು ಒಗ್ಗೂಡಿಸಿಕೊಂಡು ಮಾಡಿಲ್ಲ. ಜನರೇ ಇಲ್ಲದ ಕಾರ್ಯಕ್ರಮ ಆಗಿದೆ. ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಜಿಲ್ಲಾ ಹಾಗೂ ತಾಲ್ಲೂಕಿನ ಜನಪ್ರತಿನಿಧಿಗಳು ಭಾಗವಹಿಸಿಲ್ಲ. ಕಾಟಾಚಾರದ ಕಾರ್ಯಕ್ರಮ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.