ಸುರತ್ಕಲ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್ಐಟಿಕೆ) ಪ್ರಾಧ್ಯಾಪಕ ಎಸ್.ಎನ್.ಸುರೇಶ್ ಮಾತನಾಡಿ, ‘ಎಂಜಿನಿಯರ್ಗಳು ದೇಶದ ಬೆನ್ನೆಲುಬು ಇದ್ದಂತೆ. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸದಾ ಕಾಲ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಜ್ಞಾನ ಸಂಪಾಧಿಸುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಹುದು. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರೂ ಮಾನವೀಯ, ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.