ಡಾ.ಸಿ.ಎನ್.ಅಶ್ವತ್ಥನಾರಾಯಣ, ಎಂ.ಟಿ.ಬಿ.ನಾಗರಾಜ್, ಜೆ.ಸಿ.ಮಾಧುಸ್ವಾಮಿ ಸೇರಿ ಹಲವರು ಧ್ವನಿಗೂಡಿಸಿದರು. ಪ್ರತಿರೋಧ ಹೆಚ್ಚಾಗುತ್ತಿರುವುದನ್ನು ನೋಡಿದ ಮುಖ್ಯಮಂತ್ರಿ ಬೊಮ್ಮಾಯಿ ವಿಷಯ ತಡೆ ಹಿಡಿಯಲು ಮುಂದಾದರು. ಆಗ ಮಧ್ಯಪ್ರವೇಶಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ತಡೆ ಹಿಡಿದರೆ ತಪ್ಪು ಸಂದೇಶ ಹೋಗುತ್ತದೆ. ಉಳಿದ ಸಚಿವರಿಂದ ಪ್ರಸ್ತಾವನೆ ತರಿಸಿಕೊಳ್ಳಿ ಎಂದು ಸಲಹೆ ನೀಡಿದರು ಎಂದು ಮೂಲಗಳು ಹೇಳಿವೆ.