<p><strong>ಚಿಕ್ಕಬಳ್ಳಾಪುರ</strong>: ಆಚರಣೆಗಳಿಂದ ಪರಂಪರೆಯ ರಕ್ಷಣೆ ಸಾಧ್ಯ. ಸಂಸ್ಕೃತಿ ಮತ್ತು ಪರಂಪರೆ ಉಳಿಸುವಲ್ಲಿ ಆಚರಣೆ ಮತ್ತು ಶಿಕ್ಷಣ ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದು ಮಧುಸೂದನ ಸಾಯಿ ಹೇಳಿದರು.</p>.<p>ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಗುರುವಾರ ಆರಂಭವಾದ ದಸರಾ ಮಹೋತ್ಸವದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.</p>.<p>ಪಾರಮಾರ್ಥಿಕ ಮತ್ತು ಲೌಕಿಕ ಶಿಕ್ಷಣವನ್ನು ಒಟ್ಟಿಗೆ ನೀಡುವುದು ಭಾರತೀಯ ಶಿಕ್ಷಣ ಪರಂಪರೆಯ ವೈಶಿಷ್ಟ್ಯ. ಆಚರಣೆಗಳು ಶಿಕ್ಷಣದ ಪ್ರಾಯೋಗಿಕ ಮಹತ್ವವನ್ನು ಸಾರುತ್ತದೆ. ಭಾರತದ ಸನಾತನ ಪರಂಪರೆಯು ಅನೇಕ ಋಷಿಗಳು, ಮುನಿಗಳ ಚಿಂತನೆ ಹಾಗೂ ಮಂತ್ರಗಳ ಸಾರಸಂಗ್ರಹಗಳಿಂದ ರೂಪಿತವಾಗಿವೆ ಎಂದು ಹೇಳಿದರು.</p>.<p>ಧಾರ್ಮಿಕ ಆಚರಣೆಗಳು ಶಾಂತಿ ಮತ್ತು ನೆಮ್ಮದಿ ನೀಡುತ್ತವೆ. ಮನಸ್ಸನ್ನು ಉಲ್ಲಾಸದಿಂದ ಇರಿಸುತ್ತವೆ ಎಂದು ಹೇಳಿದರು.</p>.<p>ದಸರಾ ಮಹೋತ್ಸವದ ಅಂಗವಾಗಿ ಸಹಸ್ರ ಮೋದಕ ಹೋಮ, ಗಣಪತಿ ಹೋಮ, ನವಗ್ರಹ ಹೋಮ ಮತ್ತು ಶನಿಶಾಂತಿ ಹೋಮಗಳು ನೆರವೇರಿದವು. ಶೃಂಗೇರಿ ಶಾರದಾ ಪೀಠದ ಋತ್ವಿಜರು ಹೋಮಗಳನ್ನು ನೆರವೇರಿಸಿ, ಅವುಗಳ ಮಹತ್ವ ವಿವರಿಸಿದರು.</p>.<p>ನವದುರ್ಗೆಯರಲ್ಲಿ ಪ್ರಥಮವಾಗಿ ಅವತರಿಸಿದ ಮಾತೆ ಶೈಲಪುತ್ರಿಯನ್ನು ಆರಾಧಿಸಲಾಯಿತು. ಜಗತ್ತಿನಲ್ಲಿ ಅಧರ್ಮವನ್ನು ಮಟ್ಟ ಹಾಕಿ, ಶಾಂತಿಯನ್ನು ಸ್ಥಾಪಿಸಿ, ಸಮಾಧಾನ ಸಮೃದ್ಧಿಯನ್ನು ನೆಲೆಗೊಳಿಸುವುದೇ ಮಾತೆಯ ಅವತಾರ ಉದ್ದೇಶವಾಗಿದೆ. ಆಕೆಯನ್ನು ಜಗತ್ ಕಲ್ಯಾಣಕ್ಕಾಗಿ ಆರಾಧಿಸಲಾಗುವುದು ಎಂಬುದನ್ನು ಉಪನ್ಯಾಸದಲ್ಲಿ ವಿವರಿಸಲಾಯಿತು.</p>.<p>ಹಿಂದಿನ ವರ್ಷಗಳಂತೆ ಈ ಬಾರಿಯೂ ದುರ್ಗಾಮಾತೆಯ ಪರಿವಾರವನ್ನು ಪಶ್ಚಿಮ ಬಂಗಾಳದಿಂದ ತರಿಸಲಾಗಿತ್ತು. ವಿಶೇಷವಾದ ವೇದಿಕೆಯಲ್ಲಿ ರಾಜಗುರು ಛತ್ರ ಚಾಮರ ದೀಪದ ನರ್ತನ ಸಂಗೀತಗಳಿಂದ ಪೂಜಿಸಿ ದುರ್ಗಾಮಾತೆಗೆ ಭಕ್ತಿ ಸಮರ್ಪಿಸಲಾಯಿತು.</p>.<p>ಭೀಮನಕಟ್ಟೆ ಮಠದ ರಾಘವೇಂದ್ರ ತೀರ್ಥ ಸ್ವಾಮೀಜಿ, ಎಸ್ವಿವೈಎಎಸ್ಎ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ರಾಮಚಂದ್ರ ಭಟ್ ಕೋಟೆಮನೆ, ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಕುಲಪತಿ ಬಿ.ಎನ್. ನರಸಿಂಹಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಆಚರಣೆಗಳಿಂದ ಪರಂಪರೆಯ ರಕ್ಷಣೆ ಸಾಧ್ಯ. ಸಂಸ್ಕೃತಿ ಮತ್ತು ಪರಂಪರೆ ಉಳಿಸುವಲ್ಲಿ ಆಚರಣೆ ಮತ್ತು ಶಿಕ್ಷಣ ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದು ಮಧುಸೂದನ ಸಾಯಿ ಹೇಳಿದರು.</p>.<p>ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಗುರುವಾರ ಆರಂಭವಾದ ದಸರಾ ಮಹೋತ್ಸವದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.</p>.<p>ಪಾರಮಾರ್ಥಿಕ ಮತ್ತು ಲೌಕಿಕ ಶಿಕ್ಷಣವನ್ನು ಒಟ್ಟಿಗೆ ನೀಡುವುದು ಭಾರತೀಯ ಶಿಕ್ಷಣ ಪರಂಪರೆಯ ವೈಶಿಷ್ಟ್ಯ. ಆಚರಣೆಗಳು ಶಿಕ್ಷಣದ ಪ್ರಾಯೋಗಿಕ ಮಹತ್ವವನ್ನು ಸಾರುತ್ತದೆ. ಭಾರತದ ಸನಾತನ ಪರಂಪರೆಯು ಅನೇಕ ಋಷಿಗಳು, ಮುನಿಗಳ ಚಿಂತನೆ ಹಾಗೂ ಮಂತ್ರಗಳ ಸಾರಸಂಗ್ರಹಗಳಿಂದ ರೂಪಿತವಾಗಿವೆ ಎಂದು ಹೇಳಿದರು.</p>.<p>ಧಾರ್ಮಿಕ ಆಚರಣೆಗಳು ಶಾಂತಿ ಮತ್ತು ನೆಮ್ಮದಿ ನೀಡುತ್ತವೆ. ಮನಸ್ಸನ್ನು ಉಲ್ಲಾಸದಿಂದ ಇರಿಸುತ್ತವೆ ಎಂದು ಹೇಳಿದರು.</p>.<p>ದಸರಾ ಮಹೋತ್ಸವದ ಅಂಗವಾಗಿ ಸಹಸ್ರ ಮೋದಕ ಹೋಮ, ಗಣಪತಿ ಹೋಮ, ನವಗ್ರಹ ಹೋಮ ಮತ್ತು ಶನಿಶಾಂತಿ ಹೋಮಗಳು ನೆರವೇರಿದವು. ಶೃಂಗೇರಿ ಶಾರದಾ ಪೀಠದ ಋತ್ವಿಜರು ಹೋಮಗಳನ್ನು ನೆರವೇರಿಸಿ, ಅವುಗಳ ಮಹತ್ವ ವಿವರಿಸಿದರು.</p>.<p>ನವದುರ್ಗೆಯರಲ್ಲಿ ಪ್ರಥಮವಾಗಿ ಅವತರಿಸಿದ ಮಾತೆ ಶೈಲಪುತ್ರಿಯನ್ನು ಆರಾಧಿಸಲಾಯಿತು. ಜಗತ್ತಿನಲ್ಲಿ ಅಧರ್ಮವನ್ನು ಮಟ್ಟ ಹಾಕಿ, ಶಾಂತಿಯನ್ನು ಸ್ಥಾಪಿಸಿ, ಸಮಾಧಾನ ಸಮೃದ್ಧಿಯನ್ನು ನೆಲೆಗೊಳಿಸುವುದೇ ಮಾತೆಯ ಅವತಾರ ಉದ್ದೇಶವಾಗಿದೆ. ಆಕೆಯನ್ನು ಜಗತ್ ಕಲ್ಯಾಣಕ್ಕಾಗಿ ಆರಾಧಿಸಲಾಗುವುದು ಎಂಬುದನ್ನು ಉಪನ್ಯಾಸದಲ್ಲಿ ವಿವರಿಸಲಾಯಿತು.</p>.<p>ಹಿಂದಿನ ವರ್ಷಗಳಂತೆ ಈ ಬಾರಿಯೂ ದುರ್ಗಾಮಾತೆಯ ಪರಿವಾರವನ್ನು ಪಶ್ಚಿಮ ಬಂಗಾಳದಿಂದ ತರಿಸಲಾಗಿತ್ತು. ವಿಶೇಷವಾದ ವೇದಿಕೆಯಲ್ಲಿ ರಾಜಗುರು ಛತ್ರ ಚಾಮರ ದೀಪದ ನರ್ತನ ಸಂಗೀತಗಳಿಂದ ಪೂಜಿಸಿ ದುರ್ಗಾಮಾತೆಗೆ ಭಕ್ತಿ ಸಮರ್ಪಿಸಲಾಯಿತು.</p>.<p>ಭೀಮನಕಟ್ಟೆ ಮಠದ ರಾಘವೇಂದ್ರ ತೀರ್ಥ ಸ್ವಾಮೀಜಿ, ಎಸ್ವಿವೈಎಎಸ್ಎ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ರಾಮಚಂದ್ರ ಭಟ್ ಕೋಟೆಮನೆ, ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಕುಲಪತಿ ಬಿ.ಎನ್. ನರಸಿಂಹಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>