<p><strong>ಚಿಕ್ಕಬಳ್ಳಾಪುರ:</strong> ಇಲ್ಲಿನ ಹೂವಿನ ಮಾರುಕಟ್ಟೆಯಲ್ಲಿ ರೈತರ ಮೇಲೆ ಹಲ್ಲೆ ನಡೆಸಿರುವ ಹಮಾಲಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ರೈತರು ಸೋಮವಾರ ಪ್ರತಿಭಟಿಸಿದರು. </p>.<p>ಹೀಗೆ ಏಕಾಏಕಿ ಪ್ರತಿಭಟನೆಗೆ ಇಳಿದ ಕಾರಣ ಗೊಂದಲ ಮೂಡಿತು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಉದ್ವಿಗ್ನ ಸ್ಥಿತಿ ಉಂಟಾಯಿತು.</p>.<p>ಹಾರೋಬಂಡೆ ಗ್ರಾಮದ ರೈತ ಮಂಜುನಾಥ್ ಗುಲಾಬಿ ಹೂವಿನೊಂದಿಗೆ ನಗರ ಹೊರವಲಯದ ಸಿವಿವಿ ಕ್ಯಾಂಪಸ್ ಬಳಿಯ ಹೂವಿನ ಮಾರುಕಟ್ಟೆಗೆ ಬಂದಿದ್ದರು. ಯಾವಾಗಲೂ ಜನ ಜಂಗುಳಿಯಿಂದ ಕೂಡಿರುವ ಹೂವಿನ ಮಾರುಕಟ್ಟೆಯಲ್ಲಿ ಗೂಡ್ಸ್ ವಾಹನ ಹಿಂದಕ್ಕೆ ಬಂದು ಮಂಜುನಾಥ್ ಅವರ ಬೈಕ್ಗೆ ಡಿಕ್ಕಿಯಾಗಿದೆ.</p>.<p>ಇದರಿಂದ ಮಂಜುನಾಥ್ ಏರು ಧ್ವನಿಯಲ್ಲಿ ಮಾತನಾಡಿದ್ದಾರೆ. ಇದರಿಂದ ವಾಹನ ಚಾಲಕ ಮತ್ತು ಮಂಜುನಾಥ್ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ವಾಹನ ಚಾಲಕ ಹಾಗೂ ಹಮಾಲಿ ಕೆಲಸಗಾರರು ಸೇರಿ ರೈತ ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ರೈತರು ಆರೋಪಿಸಿದರು.</p>.<p>ಮಂಜುನಾಥ್ ಮೇಲೆ ಹಲ್ಲೆ ನಡೆಸಿದ ಚಾಲಕ ವಾಹನ ಸ್ಥಳದಲ್ಲಿಯೇ ಬಿಟ್ಟು ಪರಾರಿ ಆಗಿದ್ದಾನೆ. ವಿಷಯ ತಿಳಿದು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದಾರೆ. ಪ್ರತಿಭಟನೆ ನಡೆಸಿದ್ದಾರೆ.</p>.<p>ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರೈತರನ್ನು ನಿಯಂತ್ರಿಸಲು ಹರಸಾಹಸಪಟ್ಟರು. ಹಲ್ಲೆ ಮಾಡಿದ ಆರೋಪಿಗಳನ್ನು ಸ್ಥಳಕ್ಕೆ ಕರೆಸುವಂತೆ ರೈತರು ಒತ್ತಾಯಿಸಿದರು. ಕೊನೆಗೆ ಆರೋಪಿಗಳ ವಿರುದ್ಧ ಕ್ರಮ ಜರಗಿಸುವುದಾಗಿ ಪೊಲೀಸರು ಹೇಳಿದ ಮೇಲೆ ರೈತರ ಪ್ರತಿಭಟನೆ ವಾಪಸ್ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಇಲ್ಲಿನ ಹೂವಿನ ಮಾರುಕಟ್ಟೆಯಲ್ಲಿ ರೈತರ ಮೇಲೆ ಹಲ್ಲೆ ನಡೆಸಿರುವ ಹಮಾಲಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ರೈತರು ಸೋಮವಾರ ಪ್ರತಿಭಟಿಸಿದರು. </p>.<p>ಹೀಗೆ ಏಕಾಏಕಿ ಪ್ರತಿಭಟನೆಗೆ ಇಳಿದ ಕಾರಣ ಗೊಂದಲ ಮೂಡಿತು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಉದ್ವಿಗ್ನ ಸ್ಥಿತಿ ಉಂಟಾಯಿತು.</p>.<p>ಹಾರೋಬಂಡೆ ಗ್ರಾಮದ ರೈತ ಮಂಜುನಾಥ್ ಗುಲಾಬಿ ಹೂವಿನೊಂದಿಗೆ ನಗರ ಹೊರವಲಯದ ಸಿವಿವಿ ಕ್ಯಾಂಪಸ್ ಬಳಿಯ ಹೂವಿನ ಮಾರುಕಟ್ಟೆಗೆ ಬಂದಿದ್ದರು. ಯಾವಾಗಲೂ ಜನ ಜಂಗುಳಿಯಿಂದ ಕೂಡಿರುವ ಹೂವಿನ ಮಾರುಕಟ್ಟೆಯಲ್ಲಿ ಗೂಡ್ಸ್ ವಾಹನ ಹಿಂದಕ್ಕೆ ಬಂದು ಮಂಜುನಾಥ್ ಅವರ ಬೈಕ್ಗೆ ಡಿಕ್ಕಿಯಾಗಿದೆ.</p>.<p>ಇದರಿಂದ ಮಂಜುನಾಥ್ ಏರು ಧ್ವನಿಯಲ್ಲಿ ಮಾತನಾಡಿದ್ದಾರೆ. ಇದರಿಂದ ವಾಹನ ಚಾಲಕ ಮತ್ತು ಮಂಜುನಾಥ್ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ವಾಹನ ಚಾಲಕ ಹಾಗೂ ಹಮಾಲಿ ಕೆಲಸಗಾರರು ಸೇರಿ ರೈತ ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ರೈತರು ಆರೋಪಿಸಿದರು.</p>.<p>ಮಂಜುನಾಥ್ ಮೇಲೆ ಹಲ್ಲೆ ನಡೆಸಿದ ಚಾಲಕ ವಾಹನ ಸ್ಥಳದಲ್ಲಿಯೇ ಬಿಟ್ಟು ಪರಾರಿ ಆಗಿದ್ದಾನೆ. ವಿಷಯ ತಿಳಿದು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದಾರೆ. ಪ್ರತಿಭಟನೆ ನಡೆಸಿದ್ದಾರೆ.</p>.<p>ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರೈತರನ್ನು ನಿಯಂತ್ರಿಸಲು ಹರಸಾಹಸಪಟ್ಟರು. ಹಲ್ಲೆ ಮಾಡಿದ ಆರೋಪಿಗಳನ್ನು ಸ್ಥಳಕ್ಕೆ ಕರೆಸುವಂತೆ ರೈತರು ಒತ್ತಾಯಿಸಿದರು. ಕೊನೆಗೆ ಆರೋಪಿಗಳ ವಿರುದ್ಧ ಕ್ರಮ ಜರಗಿಸುವುದಾಗಿ ಪೊಲೀಸರು ಹೇಳಿದ ಮೇಲೆ ರೈತರ ಪ್ರತಿಭಟನೆ ವಾಪಸ್ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>