ತಾಲ್ಲೂಕಿನ ಗೋಪಾಲಪುರ, ಕೊತ್ತೂರು, ತಿಮ್ಮಸಂದ್ರ, ಬುಕ್ಕನಹಳ್ಳಿ ಹಾಗೂ ಇತರೆ ಗ್ರಾಮಗಳಲ್ಲಿ ಈಚೆಗೆ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ದಿನಕ್ಕೆ 7 ಗಂಟೆ ಕಾಲ ವಿದ್ಯುತ್ ಸರಬರಾಜು ಮಾಡುತ್ತಿದ್ದರು. ಈಗ ಬೆಳಿಗ್ಗೆ 2 ಗಂಟೆ ಹಾಗೂ ರಾತ್ರಿ 1 ಗಂಟೆ ಮಾತ್ರ ವಿದ್ಯುತ್ ಒದಗಿಸಲಾಗುತ್ತಿದೆ. ದಿನಕ್ಕೆ 3 ಗಂಟೆ ವಿದ್ಯುತ್ ನೀಡಿದರೆ ಬೇಸಿಗೆ ಕಾಲದಲ್ಲಿ ಬೆಳೆಗಳಿಗೆ ಹೇಗೆ ನೀರು ಹಾಯಿಸುವುದು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.