<p><strong>ಚಿಂತಾಮಣಿ:</strong> ಕೊರೊನಾ ಸಮೀಕ್ಷೆ ನಡೆಸಲು ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪಿಯನ್ನು 3 ದಿನಗಳ ಒಳಗೆ ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ, ಕರ್ತವ್ಯ ಬಹಿಷ್ಕರಿಸಿ ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ತಾಲ್ಲೂಕು ಆಶಾ ಕಾರ್ಯಕರ್ತೆಯರ ಸಂಘ ತಿಳಿಸಿದೆ.</p>.<p>ಮಂಗಳವಾರ ಆಶಾ ಕಾರ್ಯಕರ್ತೆಯರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕಿನ ಮುರುಗಮಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ವೆಂಕಟಲಕ್ಷ್ಮಮ್ಮ ಮೇ 22ರಂದು ಕೊರೊನಾ ಸಮೀಕ್ಷೆಗಾಗಿ ಐಮರೆಡ್ಡಿಗೆ ತರಳಿದ್ದರು. ಗ್ರಾಮದ ನಿವಾಸಿ ನಾಗರಾಜ್ ಹಾಗೂಅವರ ಕುಟುಂಬದವರು ಹಲ್ಲೆ ನಡೆಸಿದ್ದರು. ವೆಂಕಟಲಕ್ಷ್ಮಮ್ಮ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದು 4 ದಿನಗಳಾಗಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>ಗ್ರಾಮಗಳಿಗೆ ಹೊರಜಿಲ್ಲೆ, ರಾಜ್ಯಗಳಿಂದ, ಅಪರಿಚಿತ ವ್ಯಕ್ತಿಗಳು ಬಂದರೆ ಕೂಡಲೇ ಆರೋಗ್ಯ ಇಲಾಖೆ ಮತ್ತು ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಆದೇಶಿಸಿದೆ. ವರದಿ ನೀಡದಿದ್ದರೆ ಕರ್ತವ್ಯಲೋಪ ಎಂದು ಕ್ರಮಕೈಗೊಳ್ಳುತ್ತಾರೆ.</p>.<p>ಸಮೀಕ್ಷೆಗೆ ತೆರಳಿ ಮಾಹಿತಿಯನ್ನು ಕೇಳಿದರೆ ಈ ರೀತಿ ಹಲ್ಲೆ ನಡೆಸುತ್ತಾರೆ. ಬೇರೆ ಸಮಯದಲ್ಲಿ ಕೊರೊನಾ ವಾರಿಯರ್ಸ್ ಸೇವೆ ಅನನ್ಯ, ಕಣ್ಣಿಗೆ ಕಾಣುವ ದೇವರುಗಳು ಎಂದು ಹೊಗಳುವ ಅಧಿಕಾರಿಗಳು ಹಲ್ಲೆ ನಡೆದು 4 ದಿನಗಳಾದರೂ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ಸಂಘದ ಅಧ್ಯಕ್ಷೆ ಲಕ್ಷ್ಮಿ ತಿಳಿಸಿದರು.</p>.<p>ಸಂಘದ ಕಾರ್ಯದರ್ಶಿ ರೇಷ್ಮಾ, ಖಜಾಂಚಿ ಪಾರ್ವತಮ್ಮ, ಮಮತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಕೊರೊನಾ ಸಮೀಕ್ಷೆ ನಡೆಸಲು ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪಿಯನ್ನು 3 ದಿನಗಳ ಒಳಗೆ ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ, ಕರ್ತವ್ಯ ಬಹಿಷ್ಕರಿಸಿ ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ತಾಲ್ಲೂಕು ಆಶಾ ಕಾರ್ಯಕರ್ತೆಯರ ಸಂಘ ತಿಳಿಸಿದೆ.</p>.<p>ಮಂಗಳವಾರ ಆಶಾ ಕಾರ್ಯಕರ್ತೆಯರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕಿನ ಮುರುಗಮಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ವೆಂಕಟಲಕ್ಷ್ಮಮ್ಮ ಮೇ 22ರಂದು ಕೊರೊನಾ ಸಮೀಕ್ಷೆಗಾಗಿ ಐಮರೆಡ್ಡಿಗೆ ತರಳಿದ್ದರು. ಗ್ರಾಮದ ನಿವಾಸಿ ನಾಗರಾಜ್ ಹಾಗೂಅವರ ಕುಟುಂಬದವರು ಹಲ್ಲೆ ನಡೆಸಿದ್ದರು. ವೆಂಕಟಲಕ್ಷ್ಮಮ್ಮ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದು 4 ದಿನಗಳಾಗಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>ಗ್ರಾಮಗಳಿಗೆ ಹೊರಜಿಲ್ಲೆ, ರಾಜ್ಯಗಳಿಂದ, ಅಪರಿಚಿತ ವ್ಯಕ್ತಿಗಳು ಬಂದರೆ ಕೂಡಲೇ ಆರೋಗ್ಯ ಇಲಾಖೆ ಮತ್ತು ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಆದೇಶಿಸಿದೆ. ವರದಿ ನೀಡದಿದ್ದರೆ ಕರ್ತವ್ಯಲೋಪ ಎಂದು ಕ್ರಮಕೈಗೊಳ್ಳುತ್ತಾರೆ.</p>.<p>ಸಮೀಕ್ಷೆಗೆ ತೆರಳಿ ಮಾಹಿತಿಯನ್ನು ಕೇಳಿದರೆ ಈ ರೀತಿ ಹಲ್ಲೆ ನಡೆಸುತ್ತಾರೆ. ಬೇರೆ ಸಮಯದಲ್ಲಿ ಕೊರೊನಾ ವಾರಿಯರ್ಸ್ ಸೇವೆ ಅನನ್ಯ, ಕಣ್ಣಿಗೆ ಕಾಣುವ ದೇವರುಗಳು ಎಂದು ಹೊಗಳುವ ಅಧಿಕಾರಿಗಳು ಹಲ್ಲೆ ನಡೆದು 4 ದಿನಗಳಾದರೂ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ಸಂಘದ ಅಧ್ಯಕ್ಷೆ ಲಕ್ಷ್ಮಿ ತಿಳಿಸಿದರು.</p>.<p>ಸಂಘದ ಕಾರ್ಯದರ್ಶಿ ರೇಷ್ಮಾ, ಖಜಾಂಚಿ ಪಾರ್ವತಮ್ಮ, ಮಮತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>