ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ಲೆ ಆರೋಪಿ ಬಂಧಿಸದಿದ್ದರೆ ಕರ್ತವ್ಯ ಬಹಿಷ್ಕಾರ: ಆಶಾ ಕಾರ್ಯಕರ್ತೆಯರ ಎಚ್ಚರಿಕೆ

ತಾಲ್ಲೂಕು ಕಚೇರಿ ಮುಂದೆ ಧರಣಿ
Last Updated 26 ಮೇ 2020, 17:04 IST
ಅಕ್ಷರ ಗಾತ್ರ

ಚಿಂತಾಮಣಿ: ಕೊರೊನಾ ಸಮೀಕ್ಷೆ ನಡೆಸಲು ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪಿಯನ್ನು 3 ದಿನಗಳ ಒಳಗೆ ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ, ಕರ್ತವ್ಯ ಬಹಿಷ್ಕರಿಸಿ ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ತಾಲ್ಲೂಕು ಆಶಾ ಕಾರ್ಯಕರ್ತೆಯರ ಸಂಘ ತಿಳಿಸಿದೆ.

ಮಂಗಳವಾರ ಆಶಾ ಕಾರ್ಯಕರ್ತೆಯರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ತಾಲ್ಲೂಕಿನ ಮುರುಗಮಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ವೆಂಕಟಲಕ್ಷ್ಮಮ್ಮ ಮೇ 22ರಂದು ಕೊರೊನಾ ಸಮೀಕ್ಷೆಗಾಗಿ ಐಮರೆಡ್ಡಿಗೆ ತರಳಿದ್ದರು. ಗ್ರಾಮದ ನಿವಾಸಿ ನಾಗರಾಜ್ ಹಾಗೂಅವರ ಕುಟುಂಬದವರು ಹಲ್ಲೆ ನಡೆಸಿದ್ದರು. ವೆಂಕಟಲಕ್ಷ್ಮಮ್ಮ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದು 4 ದಿನಗಳಾಗಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಗ್ರಾಮಗಳಿಗೆ ಹೊರಜಿಲ್ಲೆ, ರಾಜ್ಯಗಳಿಂದ, ಅಪರಿಚಿತ ವ್ಯಕ್ತಿಗಳು ಬಂದರೆ ಕೂಡಲೇ ಆರೋಗ್ಯ ಇಲಾಖೆ ಮತ್ತು ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಆದೇಶಿಸಿದೆ. ವರದಿ ನೀಡದಿದ್ದರೆ ಕರ್ತವ್ಯಲೋಪ ಎಂದು ಕ್ರಮಕೈಗೊಳ್ಳುತ್ತಾರೆ.

ಸಮೀಕ್ಷೆಗೆ ತೆರಳಿ ಮಾಹಿತಿಯನ್ನು ಕೇಳಿದರೆ ಈ ರೀತಿ ಹಲ್ಲೆ ನಡೆಸುತ್ತಾರೆ. ಬೇರೆ ಸಮಯದಲ್ಲಿ ಕೊರೊನಾ ವಾರಿಯರ್ಸ್ ಸೇವೆ ಅನನ್ಯ, ಕಣ್ಣಿಗೆ ಕಾಣುವ ದೇವರುಗಳು ಎಂದು ಹೊಗಳುವ ಅಧಿಕಾರಿಗಳು ಹಲ್ಲೆ ನಡೆದು 4 ದಿನಗಳಾದರೂ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ಸಂಘದ ಅಧ್ಯಕ್ಷೆ ಲಕ್ಷ್ಮಿ ತಿಳಿಸಿದರು.

ಸಂಘದ ಕಾರ್ಯದರ್ಶಿ ರೇಷ್ಮಾ, ಖಜಾಂಚಿ ಪಾರ್ವತಮ್ಮ, ಮಮತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT