ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಾಲು, ಕಾಫಿಪುಡಿ, ಚಹಾಪುಡಿ, ಗೋಡಂಬಿ, ಏಲಕ್ಕಿ ಬಾಳೆಹಣ್ಣು ಸೇರಿದಂತೆ ಸುಮಾರು 17 ಪದಾರ್ಥಗಳು ಆರ್ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ಅಡಿ ಬರಲಿವೆ. ಇದರಿಂದ ಕೃಷಿ ಕ್ಷೇತ್ರದ ಮೇಲೆ ದುಷ್ಪರಿಣಾಮ ಉಂಟಾಗಿ, ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ’ ಎಂದು ಹೇಳಿದರು.