<p>ಗುಡಿಬಂಡೆ: ತಾಲ್ಲೂಕು ಜೀತ ವಿಮುಕ್ತರಿಗೆ ಸಮಗ್ರವಾದ ಪುನರ್ವಸತಿ ಕಲ್ಪಿಸುವಂತೆ ಹಾಗೂ ಗುರುತಿಸಿದ ಜೀತದಾಳುಗಳಿಗೆ ಬಿಡುಗಡೆ ಪತ್ರ ನೀಡಲು ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ತಾಲ್ಲೂಕು ಕಚೇರಿ ಮುಂದೆ ಜೀವಿಕ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಜೀವಿಕ ರಾಜ್ಯ ಸಂಚಾಲಕ ವಿ.ಗೋಪಾಲ್ ಮಾತನಾಡಿ, ಜೀವಿಕ-ಜೀತ ವಿಮುಕ್ತಿ ಕರ್ನಾಟಕ ಸಂಘಟನೆಯು ಜಿಲ್ಲೆಯಲ್ಲಿ ಜೀತ ಪದ್ಧತಿ ನಿರ್ಮೂಲನೆಗೆ ಶ್ರಮಿಸುತ್ತಿದೆ. ಜೀತ ಪದ್ಧತಿ ರದ್ದತಿ ಕಾನೂನು ಜಾರಿಗೆ ಬಂದು 45 ವರ್ಷ ಕಳೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಜೀತಪದ್ಧತಿ ಕಾನೂನನ್ನು ಅರ್ಥೈಸಿಕೊಳ್ಳಲು ದರ್ಪ ಧೋರಣೆಯನ್ನು ಅನುಸರಿಸುತ್ತಿರು<br />ವುದು ಸರಿಯೇ?<br />ಎಂದು ಪ್ರಶ್ನಿಸಿದರು.</p>.<p>ಜೀವಿಕ ಸಂಘಟನೆಯ ತಾಲ್ಲೂಕು ಸಂಚಾಲಕ ರಾಮಾಂಜಿನೇಯ ಮಾತನಾಡಿ, ತಾಲ್ಲೂಕಿನಲ್ಲಿ ಸಂಘಟನೆಯು ನಿರಂತರವಾಗಿ ಜೀತದಾಳುಗಳ ಬಗ್ಗೆ, ಬಾಲ ಕಾರ್ಮಿಕರ ಬಗ್ಗೆ, ಮಹಿಳೆಯರ ಬಗ್ಗೆ, ಮಕ್ಕಳ ಬಗ್ಗೆ ಕೆಲಸ ನಿರ್ವಹಿಸಿಕೊಂಡು ಬರುತ್ತಿದೆ. 131 ಮಂದಿಯನ್ನು ಜೀತಮುಕ್ತರೆಂದು ಗುರುತಿಸಿದ್ದು<br />ಸರಕಾರದಿಂದ ಪರಿಹಾರ ಕೊಡುವುದರಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ ತೋರುತ್ತಿದೆ ಎಂದರು.</p>.<p>ಜೀತದಾಳುವಿಗೆ 24 ಗಂಟೆಯೊಳಗೆ ಬಿಡುಗಡೆ ಪತ್ರ ಮತ್ತು ಪುನರ್ವಸತಿ ಕಲ್ಪಿಸಬೇಕೆಂದು ಕಾನೂನು ಇದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ದೂರಿದರು.</p>.<p>ಜೀವಿಕ ರಾಜ್ಯ ಸಂಚಾಲಕಿ ರತ್ನಮ್ಮ, ಸಂಚಾಲಕ ಚನ್ನರಾಯಪ್ಪ, ಶ್ರೀನಿವಾಸ್, ಮುಖಂಡ ಅಶ್ವತ್ಥಪ್ಪ, ನಾರಾಯಣಪ್ಪ, ಲಕ್ಷೀದೇವಮ್ಮ, ಮುನಿಯಪ್ಪ, ಗಂಗಾಧರಪ್ಪ, ಆದಿನಾರಾಯಣಪ್ಪ, ರವೀಂದ್ರ, ರಾಮಪ್ಪ, ನಾರಾಯಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಡಿಬಂಡೆ: ತಾಲ್ಲೂಕು ಜೀತ ವಿಮುಕ್ತರಿಗೆ ಸಮಗ್ರವಾದ ಪುನರ್ವಸತಿ ಕಲ್ಪಿಸುವಂತೆ ಹಾಗೂ ಗುರುತಿಸಿದ ಜೀತದಾಳುಗಳಿಗೆ ಬಿಡುಗಡೆ ಪತ್ರ ನೀಡಲು ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ತಾಲ್ಲೂಕು ಕಚೇರಿ ಮುಂದೆ ಜೀವಿಕ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಜೀವಿಕ ರಾಜ್ಯ ಸಂಚಾಲಕ ವಿ.ಗೋಪಾಲ್ ಮಾತನಾಡಿ, ಜೀವಿಕ-ಜೀತ ವಿಮುಕ್ತಿ ಕರ್ನಾಟಕ ಸಂಘಟನೆಯು ಜಿಲ್ಲೆಯಲ್ಲಿ ಜೀತ ಪದ್ಧತಿ ನಿರ್ಮೂಲನೆಗೆ ಶ್ರಮಿಸುತ್ತಿದೆ. ಜೀತ ಪದ್ಧತಿ ರದ್ದತಿ ಕಾನೂನು ಜಾರಿಗೆ ಬಂದು 45 ವರ್ಷ ಕಳೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಜೀತಪದ್ಧತಿ ಕಾನೂನನ್ನು ಅರ್ಥೈಸಿಕೊಳ್ಳಲು ದರ್ಪ ಧೋರಣೆಯನ್ನು ಅನುಸರಿಸುತ್ತಿರು<br />ವುದು ಸರಿಯೇ?<br />ಎಂದು ಪ್ರಶ್ನಿಸಿದರು.</p>.<p>ಜೀವಿಕ ಸಂಘಟನೆಯ ತಾಲ್ಲೂಕು ಸಂಚಾಲಕ ರಾಮಾಂಜಿನೇಯ ಮಾತನಾಡಿ, ತಾಲ್ಲೂಕಿನಲ್ಲಿ ಸಂಘಟನೆಯು ನಿರಂತರವಾಗಿ ಜೀತದಾಳುಗಳ ಬಗ್ಗೆ, ಬಾಲ ಕಾರ್ಮಿಕರ ಬಗ್ಗೆ, ಮಹಿಳೆಯರ ಬಗ್ಗೆ, ಮಕ್ಕಳ ಬಗ್ಗೆ ಕೆಲಸ ನಿರ್ವಹಿಸಿಕೊಂಡು ಬರುತ್ತಿದೆ. 131 ಮಂದಿಯನ್ನು ಜೀತಮುಕ್ತರೆಂದು ಗುರುತಿಸಿದ್ದು<br />ಸರಕಾರದಿಂದ ಪರಿಹಾರ ಕೊಡುವುದರಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ ತೋರುತ್ತಿದೆ ಎಂದರು.</p>.<p>ಜೀತದಾಳುವಿಗೆ 24 ಗಂಟೆಯೊಳಗೆ ಬಿಡುಗಡೆ ಪತ್ರ ಮತ್ತು ಪುನರ್ವಸತಿ ಕಲ್ಪಿಸಬೇಕೆಂದು ಕಾನೂನು ಇದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ದೂರಿದರು.</p>.<p>ಜೀವಿಕ ರಾಜ್ಯ ಸಂಚಾಲಕಿ ರತ್ನಮ್ಮ, ಸಂಚಾಲಕ ಚನ್ನರಾಯಪ್ಪ, ಶ್ರೀನಿವಾಸ್, ಮುಖಂಡ ಅಶ್ವತ್ಥಪ್ಪ, ನಾರಾಯಣಪ್ಪ, ಲಕ್ಷೀದೇವಮ್ಮ, ಮುನಿಯಪ್ಪ, ಗಂಗಾಧರಪ್ಪ, ಆದಿನಾರಾಯಣಪ್ಪ, ರವೀಂದ್ರ, ರಾಮಪ್ಪ, ನಾರಾಯಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>