ಪ್ರತಿಭಟನಾ ಸ್ಥಳಕ್ಕೆ ಪಾತಪಾಳ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರತ್ನಯ್ಯ ಬಂದು, ಪ್ರತಿಭಟನಾಕಾರರೊಂದಿಗೆ ಮಾತನಾಡಿ, ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ಅಭಿವೃದ್ಧಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ನಂತರ, ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು. ಪ್ರತಿಭಟನೆಯಲ್ಲಿ ತಿಪ್ಪಾರೆಡ್ಡಿ, ಬೈರೆಡ್ಡಿ, ಕಿಟ್ಟಪ್ಪ, ಹರೀಶ್, ಮಾರಪರೆಡ್ಡಿ, ಮುನಿರಾಜ, ಕೆ.ಎಂ.ವೆಂಕಟರಾಮರೆಡ್ಡಿ, ಕೃಷ್ಣಾರೆಡ್ಡಿ, ವೆಂಕಟೇಶ್, ಮೂತರ್ಿ, ಶಿವಪ್ಪ, ಆದಿಲಕ್ಷ್ಮಮ್ಮ, ಗೌರಮ್ಮ ಹಾಜರಿದ್ದರು.