<p><strong>ಗುಡಿಬಂಡೆ</strong>: ಹೊಸವುಡ್ಯ ಗ್ರಾಮದಲ್ಲಿ ದೇವನಹಳ್ಳಿ ವಕೀಲರ ಸಂಘದ ಸದಸ್ಯ ವಕೀಲ ಮಹೇಶ್ ಅವರ ಮೇಲೆ ಕೆಲ ಕಿಡಿಗೇಡಿಗಳು ಕ್ಷುಲ್ಲಕ ಕಾರಣಕ್ಕಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದನ್ನು ಖಂಡಿಸಿ ಶನಿವಾರ ವಕೀಲರು ಕೋರ್ಟ್ ಕಲಾಪ ಬಹಿಷ್ಕರಿಸಿದರು.</p>.<p>ವಕೀಲರ ಸಂಘದ ಅಧ್ಯಕ್ಷ ಎ.ರಾಮನಾಥರೆಡ್ಡಿ ಮಾತನಾಡಿ, ಸಮಾಜಘಾತುಕ ಶಕ್ತಿಗಳ ಕಡಿವಾಣಕ್ಕೆ ಪೊಲೀಸರು ಮುಂದಾಗಬೇಕು. ಪದೇ ಪದೇ ವಕೀಲರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಲೇ ಇದೆ. ಸರ್ಕಾರ ವಕೀಲರ ರಕ್ಷಣಾ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ವಕೀಲರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಪೊಲೀಸರು ಬಂಧಿಸಬೇಕು. ಇಂದು ನ್ಯಾಯಾಲಯದ ಕಾರ್ಯಕಲಾಪಗಳನ್ನು ಕೈಬಿಡಲಾಗಿದ್ದು, ಆರೋಪಿಗಳ ಪರವಾಗಿ ಯಾವುದೇ ವಕೀಲರು ವಕಾಲತ್ತು ಸಲ್ಲಿಸಬಾರದು. ವಕೀಲರ ಮೇಲಿನ ಹಲ್ಲೆಗಳನ್ನು ತಡೆಗಟ್ಟಲು ಸರಕಾರ ರಕ್ಷಣಾ ಕಾಯ್ದೆಯನ್ನು ಜಾರಿ ಮಾಡಿ ಆದೇಶ ಹೊರಡಿಸಬೇಕು ಎಂದರು.</p>.<p>ಗೌರಿಬಿದನೂರು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಇ.ಸಿ ಗಂಗಯ್ಯ, ವಕೀಲ ನಾರಾಯಣಸ್ವಾಮಿ, ಪಿ.ವಿ.ಲಕ್ಷ್ಮಿನಾರಾಯಣ, ಗಂಗರಾಜು, ಜಿ.ವಿ. ವಿಶ್ವನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ</strong>: ಹೊಸವುಡ್ಯ ಗ್ರಾಮದಲ್ಲಿ ದೇವನಹಳ್ಳಿ ವಕೀಲರ ಸಂಘದ ಸದಸ್ಯ ವಕೀಲ ಮಹೇಶ್ ಅವರ ಮೇಲೆ ಕೆಲ ಕಿಡಿಗೇಡಿಗಳು ಕ್ಷುಲ್ಲಕ ಕಾರಣಕ್ಕಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದನ್ನು ಖಂಡಿಸಿ ಶನಿವಾರ ವಕೀಲರು ಕೋರ್ಟ್ ಕಲಾಪ ಬಹಿಷ್ಕರಿಸಿದರು.</p>.<p>ವಕೀಲರ ಸಂಘದ ಅಧ್ಯಕ್ಷ ಎ.ರಾಮನಾಥರೆಡ್ಡಿ ಮಾತನಾಡಿ, ಸಮಾಜಘಾತುಕ ಶಕ್ತಿಗಳ ಕಡಿವಾಣಕ್ಕೆ ಪೊಲೀಸರು ಮುಂದಾಗಬೇಕು. ಪದೇ ಪದೇ ವಕೀಲರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಲೇ ಇದೆ. ಸರ್ಕಾರ ವಕೀಲರ ರಕ್ಷಣಾ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ವಕೀಲರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಪೊಲೀಸರು ಬಂಧಿಸಬೇಕು. ಇಂದು ನ್ಯಾಯಾಲಯದ ಕಾರ್ಯಕಲಾಪಗಳನ್ನು ಕೈಬಿಡಲಾಗಿದ್ದು, ಆರೋಪಿಗಳ ಪರವಾಗಿ ಯಾವುದೇ ವಕೀಲರು ವಕಾಲತ್ತು ಸಲ್ಲಿಸಬಾರದು. ವಕೀಲರ ಮೇಲಿನ ಹಲ್ಲೆಗಳನ್ನು ತಡೆಗಟ್ಟಲು ಸರಕಾರ ರಕ್ಷಣಾ ಕಾಯ್ದೆಯನ್ನು ಜಾರಿ ಮಾಡಿ ಆದೇಶ ಹೊರಡಿಸಬೇಕು ಎಂದರು.</p>.<p>ಗೌರಿಬಿದನೂರು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಇ.ಸಿ ಗಂಗಯ್ಯ, ವಕೀಲ ನಾರಾಯಣಸ್ವಾಮಿ, ಪಿ.ವಿ.ಲಕ್ಷ್ಮಿನಾರಾಯಣ, ಗಂಗರಾಜು, ಜಿ.ವಿ. ವಿಶ್ವನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>