ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗೇಪಲ್ಲಿ: ಕಾರ್ಪೊರೇಟ್ ಕಂಪನಿಗಳು ತೊಲಗಲಿ

ತಾಲ್ಲೂಕು ಕಚೇರಿ ಎದುರು ಕೃಷಿ, ಕೂಲಿಕಾರ್ಮಿಕ ಸಂಘಟನೆಗಳ ಪ್ರತಿಭಟನೆ
Last Updated 10 ಆಗಸ್ಟ್ 2021, 4:10 IST
ಅಕ್ಷರ ಗಾತ್ರ

ಬಾಗೇಪಲ್ಲಿ: ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೊರೇಟ್ ಕಂಪನಿಗಳೇ ಭಾರತ ಬಿಟ್ಟು ತೊಲಗಿ ಎಂದು ರೈತ, ಕಾರ್ಮಿಕ ಹಾಗೂ ಕೂಲಿಕಾರರು ಹಮ್ಮಿಕೊಂಡಿರುವ ದೇಶವ್ಯಾಪಿ ಪ್ರತಿಭಟನೆ ಅಂಗವಾಗಿ ಸೋಮವಾರ ಪ್ರಾಂತ ರೈತ ಸಂಘ, ಕೃಷಿಕೂಲಿಕಾರರ ಸಂಘ, ಸಿಐಟಿಯು ನೇತೃತ್ವದಲ್ಲಿ ನೂರಾರು ಕೃಷಿ ಕೂಲಿಕಾರ್ಮಿಕರು ತಾಲ್ಲೂಕು ಕಚೇರಿ ಮುಂದೆಪ್ರತಿಭಟನೆ ನಡೆಸಿದರು.

ಪ್ರಾಂತ ರೈತ ಸಂಘ ತಾಲ್ಲೂಕು ಕಾರ್ಯದರ್ಶಿ ಪಿ.ಮಂಜುನಾಥರೆಡ್ಡಿ ಮಾತನಾಡಿ, ದೇಶದ ಸಂಪತ್ತನ್ನು ಲೂಟಿ ಹೊಡೆಯಲು ಕಾರ್ಪೊರೇಟ್ ಕಂಪನಿಗಳಿಗೆ, ಬಂಡವಾಳಶಾಹಿ, ಶ್ರೀಮಂತರಿಗೆ ಅನುಕೂಲ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊರಟಿವೆ. ಕಾರ್ಪೊರೇಟ್ ಕಂಪನಿಗಳೇ ಭಾರತ ಬಿಟ್ಟು ತೊಲಗಿ ಎಂದು ಹೋರಾಟ ಮತ್ತಷ್ಟು ಬಲಿಷ್ಟವಾಗಬೇಕು ಎಂದರು.

ಕೃಷಿ ರಂಗದಲ್ಲಿ ಸುಧಾರಣೆ ಜಾರಿಗೆ ತರುವ ನೆಪದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಿರುವ 3 ಹೊಸ ಕೃಷಿ ಕಾನೂನುಗಳು ರೈತ ವಿರೋಧಿ ಆಗಿವೆ. ವ್ಯವಸಾಯ ರಂಗವನ್ನು ಕಬಳಿಸಿ, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಲು ಹೊರಟಿರುವುದು ಖಂಡನೀಯ ಎಂದರು.

8 ತಿಂಗಳಿನಿಂದ ದೆಹಲಿಯ ಗಡಿ ಪ್ರದೇಶಗಳಲ್ಲಿ ರೈತರು ಹೋರಾಟ ಮಾಡುತ್ತಿದ್ದರೂ, ಪ್ರಧಾನಮಂತ್ರಿ ನರೇಂದ್ರಮೋದಿ ಮಾತನಾಡಿಸಿಲ್ಲ. 3 ಕೃಷಿ ತಿದ್ದುಪಡಿ ಕಾನೂನುಗಳನ್ನು ಜಾರಿ ಮಾಡಲು ರೈತರು ಬಿಡುವುದಿಲ್ಲ ಎಂದು ತಿಳಿಸಿದರು.

ಕೃಷಿ ಕೂಲಿಕಾರರ ಸಂಘಟನೆಯ ರಾಜ್ಯ ಸಮಿತಿ ಸದಸ್ಯ ಬಿಳ್ಳೂರು ನಾಗರಾಜ್ ಮಾತನಾಡಿ,ತಾಲ್ಲೂಕಿನಲ್ಲಿ ಬಗರ್‌ಹುಕುಂಗೆ ಅರ್ಜಿ ಸಲ್ಲಿಸಿ ವರ್ಷ ಕಳೆದರೂ ಸಾಗುವಳಿ ಚೀಟಿ ನೀಡಿಲ್ಲ. ಕೃಷಿಕೂಲಿ ಕಾರ್ಮಿಕರಿಗೆ ಹಾಗೂ ವಲಸೆ ಕಾರ್ಮಿಕರಿಗೆಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದರು.

ಕೃಷಿಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ, ಸಮಿತಿ ಸದಸ್ಯೆ ಬಿ.ಸಾವಿತ್ರಮ್ಮ, ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎನ್.ಶ್ರೀರಾಮಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀರಾಮನಾಯಕ್, ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ಮಹಮದ್ ಅಕ್ರಂ, ನಗರ ಸಮಿತಿ ಕಾರ್ಯದರ್ಶಿ ಅಶ್ವಥ್ಥಪ್ಪ, ಎಚ್.ಎ.ರಾಮಲಿಂಗಪ್ಪ, ಫಾತೀಮಾಭಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT